ಮೊಬೈಲ್ ಕಳೆದುಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ

ದಾವಣಗೆರೆ, ಸೆಪ್ಟೆಂಬರ್ 30: ಮೊಬೈಲ್ ಕಳೆದುಹೋದದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ನಿಟ್ಟುವಳ್ಳಿ ನಿವಾಸಿ ಸಿದ್ದೇಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ದಾವಣಗೆರೆಯ ಡಿಸಿಎಂ ಟೌನ್ ಶಿಪ್ ಬಳಿ ಈ ಘಟನೆ ನಡೆದಿದ್ದು, ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟೆಂಬರ್ 29ರಂದು ಭಾನುವಾರ ತಮ್ಮ ಪಕ್ಕದ ಮನೆಯವರ ಮೊಬೈಲನ್ನು ಪಡೆದುಕೊಂಡಿದ್ದ ಸಿದ್ದೇಶ್ ಅಂದೇ ಅದನ್ನು ಕಳೆದುಕೊಂಡಿದ್ದ. ವಿಷಯ ತಿಳಿದು ಆ ಮನೆಯವರೂ ಈತನನ್ನು ಬೈದು, ಸಿದ್ದೇಶ್ ಮನೆಯವರಿಗೆ ವಿಷಯ ತಿಳಿಸುವುದಾಗಿ ಹೇಳಿದ್ದರು.

Please follow and like us:

tmadmin

Leave a Reply

Your email address will not be published. Required fields are marked *

Next Post

ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

Wed Oct 2 , 2019
ಬೆಂಗಳೂರು, ಅಕ್ಟೋಬರ್ 02 : ಚುನಾವಣಾ ಆಯೋಗ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರ ಉಪ ಚುನಾವಣೆ ರಾಜ್ಯದ ಗಮನ ಸೆಳೆದಿದೆ. ಎಂಟಿಬಿ ನಾಗರಾಜ್ ಸೋಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಎಂಟಿಬಿ ನಾಗರಾಜ್ 2018ರ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದ ಅವರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial