ಮೋದಿಗೆ ರೈತರ ಕಷ್ಟ ಕಾಣುತ್ತಿಲ್ಲವೆ..!/ ಪಿಎಂ ವಿರುದ್ಧ ಸಿದ್ದರಾಮಯ್ಯ ಗರಂ

ಹದಿನಾಲ್ಕು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿರುವ ಪ್ರಧಾನಿಗಳು, ಇದರಿಂದ ರೈತರ ಬೆಳೆಗೆ ದುಪ್ಪಟ್ಟು ಬೆಲೆ ಸಿಗಲಿದೆ ಎಂದು ಹೇಳಿಕೊಳ್ಳುತ್ತಿರುವುದು ಅಮಾಯಕ ರೈತರ ಹಾದಿ ತಪ್ಪಿಸುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಅವರು,” ರೈತರ ಬೆಳೆಯ ಉತ್ಪಾದನಾ ವೆಚ್ಚಕ್ಕೆ ಶೇಕಡಾ ೫೦ರಷ್ಟು ಲಾಭವನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ ಎಂಬುದು ನರೇಂದ್ರ ಮೋದಿ ಅವರ ಘೋಷಣೆಯಾಗಿತ್ತು. ಆದರೆ, ಉತ್ಪಾದನಾ ವೆಚ್ಚದ ಲೆಕ್ಕದಲ್ಲಿಯೇ ಪ್ರಧಾನಿಗಳು ರೈತರಿಗೆ ಮೋಸ ಮಾಡಿದ್ದಾರೆ,” ಎಂದು ಕಿಡಿಕಾರಿದರು. “ಕೃಷಿ ತಜ್ಞ ಎಂ.ಎಸ್ ಸ್ವಾಮಿನಾಥನ್ ವರದಿಯ ಪ್ರಕಾರ ‘ಅ-೨ ಉತ್ಪಾದನಾ ವೆಚ್ಚ’ ಎಂದರೆ ಬೀಜ, ಗೊಬ್ಬರ ಮತ್ತು ಹೂಡಿದ ಬಂಡವಾಳದ ಮೇಲಿನ ಬಡ್ಡಿ ಮತ್ತು ರೈತ ಕುಟುಂಬದ ಕೂಲಿಯನ್ನೂ ಪರಿಗಣಿಸಬೇಕಾಗುತ್ತದೆ. ಕೇಂದ್ರ ರ‍್ಕಾರ ಅ-೨ ಸೂತ್ರ ಪಾಲಿಸಿದೆಯೇ?,” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

Please follow and like us:

Leave a Reply

Your email address will not be published. Required fields are marked *

Next Post

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅನುಮತಿ / ಜೂ. ೮ರಿಂದ ದರ್ಶನ

Wed Jun 3 , 2020
ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಮರ‍್ಚ್ ೨೫ರಿಂದ ದೇಶದಲ್ಲಿ ಲಾಕ್ ಡೌನ್ ಹೇರಲಾಗಿತ್ತು, ಇದರ ಸಲುವಾಗಿ ದೇಶದ ಎಲ್ಲ ದೇಗುಲವನ್ನು ಮುಚ್ಚಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆಯ ನಂತರ ಮತ್ತೆ ಭಕ್ತಾಧಿಗಳಿಗೆ ದೇವರ ರ‍್ಶನಕ್ಕೆ ಅನುಮತಿ ನೀಡಲಾಗಿದ್ದು, ಈಗ ತಿರುಮಲದ ವೆಂಕಟೇಶ್ವರ ದೇವಾಲಯ ಜೂನ್ ೮ ರಿಂದ ತೆರೆಯಲಿದ್ದು, ತಿಮ್ಮಪ್ಪನ ರ‍್ಶನ ಸಿಗಲಿದೆ. ಆರಂಭದ ದಿನಗಳಲ್ಲಿ ಎಲ್ಲಾ ಭಕ್ತರಿಗೆ ರ‍್ಶನಕ್ಕೆ ಅನುಮತಿ ನೀಡುವುದಿಲ್ಲ. ಪ್ರತಿ ಭಕ್ತರ ನಡುವೆ ೬ ಅಡಿ […]

Related posts

Advertisement

Wordpress Social Share Plugin powered by Ultimatelysocial