ಯಾರೋ ಕೆಲವರು ಮಾಡಿದ ಕೃತ್ಯಕ್ಕೆ ಒಂದು ಸಮಾಜವನ್ನು ದೂಷಿಸುವುದು ಮತ್ತು ನಾಯಕರು ಪ್ರಚೋಧನಾಕಾರಿ ಹೇಳಿಕೆ ನೀಡುವುದು ಸರಿಯಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಪಾದರಾಯನಪುರ ಗಲಾಟೆ ಸಂಬಂಧಿತ ಮುಸ್ಲಿಂ ನಾಯಕರ ಸಭೆ ನಡೆಸಿದ ಬಳಿಕ ಮಾತನಾಡಿರುವ ಅವರು,, “ಯಾರೋ ವ್ಯಕ್ತಿಗಳು ಮಾಡಿದ ಕೃತ್ಯಕ್ಕೆ ಇಡೀ ಸಮಾಜವನ್ನು ದೋಷಿಸುವುದು ಸರಿಯಲ್ಲ. ಪಾದರಾಯನಪುರ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಒಳ್ಳೆ ಯ ನಿರ್ಧಾರಗಳಿಗೆ ನಾವು ಸಹಕಾರ ಕೊಡುತ್ತೇವೆ. ಆದರೆ, ನಾವು ಎಷ್ಟೇ ಸಹಕಾರ ನೀಡುತ್ತಿದ್ರೂ, ಸಚಿವರು ಮತ್ತು ಶಾಸಕರ ಹೇಳಿಕೆಗಳನ್ನೂ ಗಮನಿಸಿ. ಇಂತಹ ಸಂದರ್ಭದಲ್ಲಿ ಯಾರೇ ಆಗಲಿ ಪ್ರಚೋಧನಾಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಆದರೆ, ಬಿಜೆಪಿ ಪಕ್ಷದ ಕೆಲ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಿಎಂ ಬಿಎಸ್ವೈ ಗೆ ಮನವಿ ಮಾಡಿದ್ದಾರೆ. “ಈ ಘಟನೆ ಖಂಡನೀಯ, ವ್ಯಕ್ತಿ ಗಳು ಮಾಡಿದ ಕೃತ್ಯಕ್ಕೆ ವ್ಯಕ್ತಿ ಗಳಿಗೆ ಶಿಕ್ಷೆಯಾಗಬೇಕು. ಇಂತಹ ವಿಚಾರದಲ್ಲಿ ವಿನಾಯಿತಿ ಎಂಬ ಮಾತೇ ಇರುವುದಿಲ್ಲ. ರಾಜ್ಯ ಸರ್ಕಾರ ಈ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಲಿ ಈ ಘಟನೆ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ತಕ್ಕ ಕ್ರಮ ತೆಗೆದುಕೊಳ್ಳಲೇಬೇಕು” ಎಂದು ಹೇಳಿದರು.
ವರದಿ:ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ