ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಹೊಸದಾಗಿ 30 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ ರಾಜ್ಯದಲ್ಲಿ 30 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ. ಅಂದಹಾಗೇ ಇಂದು ದಕ್ಷಿಣ ಕನ್ನಡ ಒಬ್ಬರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ಬೆಳಗಾವಿಯ 14 ಜನರಿಗೆ, ತುಮಕೂರಿನ ಒಬ್ಬರಿಗೆ, ಬೆಂಗಳೂರಿನ 7 ಜನರಿಗೆ, ಕಲಬುರ್ಗಿಯ ಒಬ್ಬರಿಗೆ ಹಾಗೂ ದಾವಣಗೆರೆಯ ಒಬ್ಬರಿಗೆ ಕೊರೋನಾ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಇದುವರೆಗೆ 21 ಜನರು ಸಾವನ್ನಪ್ಪಿದ್ದಾರೆ. ಕೊರೋನಾದಿಂದ  229 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ವಿಶ್ವಸಂಸ್ಥೆಗೆ ವಿದಾಯ ಹೇಳಿದ ಸಯ್ಯದ್ ಅಕ್ಬರುದ್ದೀನ್

Thu Apr 30 , 2020
ನ್ಯೂಯಾರ್ಕ್: ವಿಶ್ವ ಸಂಸ್ಥೆಯಲ್ಲಿ ಭಾರತದ ಗೌರವ ಹಾಗೂ ಪ್ರತಿಷ್ಠೆಯನ್ನು ಮತ್ತಷ್ಟು ಮತ್ತಷ್ಟು ಹೆಚ್ಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಿ ಜಗತ್ತಿನ ಗಮನ ಸೆಳೆದಿದ್ದ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಇಂದು ಸೇವೆಯಿಂದ ನಿವೃತ್ತಿಗೊಂಡರು. ಪ್ರಮುಖವಾಗಿ ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ದ ಪಾಕಿಸ್ತಾನ ಸುಳ್ಳು ಆರೋಪ ಮಾಡಿದ ಪ್ರತಿಬಾರಿಯೂ ಪಾಕಿಸ್ತಾನ ಪ್ರತಿನಿಧಿಯ ಬಾಯಿ ಮುಚ್ಚಿಸುವ ರೀತಿ ಸಮರ್ಥ ಉತ್ತರವನ್ನು ಅಕ್ಬರುದ್ದೀನ್ ನೀಡುತ್ತಿದ್ದರು. ೧೯೮೫ ತಂಡಕ್ಕೆ ಸೇರಿದ ಐ ಎಫ್ ಎಸ್ (ಭಾರತೀಯ ವಿದೇಶಾಂಗ ಸೇವೆ) […]

Advertisement

Wordpress Social Share Plugin powered by Ultimatelysocial