ರಾಜ್ಯಸಭಾ ಚುನಾವಣೆ, ನಾಮಪತ್ರ ಸಲ್ಲಿಸಿದ ಖರ್ಗೆ

ಜೂನ್‌ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜನ ಖರ್ಗೆ  ಇಂದು  ನಾಮಪತ್ರ ಸಲ್ಲಿಸಿದರು. ವಿಧಾನಸಭಾ ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರವನ್ನು ಖರ್ಗೆ ಸಲ್ಲಿಸಿದರು‌. ಮುಖಂಡರ ಜೊತೆಗೆ ಖರ್ಗೆ ಚರ್ಚೆಯನ್ನು ನಡೆಸಿದರು. ಇದಾದ ಬಳಿಕ ನಾಮಪತ್ರವನ್ನು ಸಲ್ಲಿಸಿದರು. ಈ ವೇಳೆ ರಾಜ್ಯ ವಿಧಾನ ಸಭೆಯಲ್ಲಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಆರ್ ವಿ ದೇಶಪಾಂಡೆ ಉಪಸ್ಥಿತರಿದ್ದರು. ನಾಳೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಜೆಡಿಎಸ್‌ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಬಿಜೆಪಿಯ ಅಭ್ಯರ್ಥಿಗಳಾದ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರು ನಾಳೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಮಂಡ್ಯ ಶುಗರ್ ಕಾರ್ಖಾನೆ ಮಾರಾಟ ಬೇಡ: ಡಿಕೆಶಿ ಎಚ್ಚರಿಕೆ

Mon Jun 8 , 2020
ಮಂಡ್ಯದ ಮೈಶುಗರ್ ಕಾರ್ಖಾನೆ ಮಾರಾಟ ಮಾಡಲು ರಾಜ್ಯ ಸರ್ಕಾರ ಮುಂದಾದರೆ ಹೋರಾಟ ನಡೆಸಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಟ್ವೀಟ್‌ ಮಾಡುವ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿದ ಅವರು, ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬಾಂಧವ್ಯದ ಬೆಸುಗೆ ಇಂದು ನಿನ್ನೆಯದಲ್ಲ. ಹೀಗಿರುವಾಗ ನ್ಯೂನತೆ ಸರಿಪಡಿಸಿ ಸರ್ಕಾರವೇ ಕಾರ್ಖಾನೆಯನ್ನು ನಡೆಸಬೇಕು. ಅದನ್ನು ಬಿಟ್ಟು ಮಾರಾಟ ಮಾಡುವುದು ಸರಿಯಲ್ಲ. ಅದಕ್ಕೆ ಬಿಡುವುದೂ ಇಲ್ಲ. ಈ ವಿಚಾರದಲ್ಲಿ ಮಂಡ್ಯ […]

Advertisement

Wordpress Social Share Plugin powered by Ultimatelysocial