ಬೆಂಗಳೂರು: ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕರ ತೀವ್ರ ವಿರೋಧದ ನಡುವೆಯೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಗಳನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪಾದರಾಯನ ಪುರ ಗಲಭೆ ಪ್ರಕರಣದ 54 ಆರೋಪಿಗಳನ್ನು ನಿನ್ನೆ ರಾಮನಗರ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಇವತ್ತು ಉಳಿದ 76 ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ. ರಾಮನಗರ ಗ್ರೀನ್ ಝೋನ್ ಆಗಿರುವ ಹಿನ್ನೆಲೆ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗ್ತಿದೆ. ಅಲ್ಲಿನ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಮುನ್ನ ಆರೋಪಿಗಳಿಗೆ ಕೋವಿಡ್- 19 ಪರೀಕ್ಷೆ ನಡೆಸಲಾಗುತ್ತದೆ.ನಿನ್ನೆ ಉಳಿದ 76 ಆರೋಪಿಗಳನ್ನು 3 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಎಲ್ಲರಿಗೂ ಕೋವಿಡ್-19 ಟೆಸ್ಟ್ ಮಾಡಿಸಿ ಜೈಲಿಗೆ ಕಳುಹಿಸಿ ಎಂದು ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ಕೋವಿಡ್-19 ಟೆಸ್ಟ್ ಮಾಡಿ ಆರೋಪಿಗಳನ್ನು ರಾಮನಗರ ಜೈಲಿಗೆ ರವಾನಿಸಲಾಗುತ್ತದೆ.
ರಾಮನಗರ ಜೈಲಿಗೆ ಆರೋಪಿಗಳು ಶಿಫ್ಟ್
Please follow and like us: