ರೈತರ ಪರಿಹಾರದ ದುಡ್ಡು ಏರ್‌ಟೇಲ್ ಅಕೌಂಟ್‌ಗೆ ಜಮಾ

ಬೆಂಗಳೂರು: ತಮ್ಮ ವೈಯಕ್ತಿಕ ಖಾತೆಗೆ ಆಧಾರ್‌ ಲಿಂಕ್ ಮಾಡದ ಪರಿಣಾಮ ರೈತರಿಗೆ ಸಿಗಬೇಕಾಗಿರುವ ಪರಿಹಾರದ ಹಣ ಏರ್‌ಟೇಲ್‌ ಖಾತೆಗೆ ಜಮೆ ಆಗುವ ಮೂಲಕ ಗೊಂದಲ ಸೃಷ್ಟಿಯಾಗಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೃಷಿ ಸಚಿವ ಬಿ.ಸಿ ಪಾಟೀಲ್ ಕೂಡಲೇ ರೈತರು ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಿ ಎಂದು ಮನವಿ ಮಾಡಿಕೊಂಡರು.ಸರ್ಕಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಯಡಿ ಡಿಬಿಟಿ ಮಾರ್ಗಸೂಚಿಯಂತೆ ವಿದ್ಯುನ್ಮಾನವಾಗಿ ನೇರವಾಗಿ ರೈತರ ಖಾತೆಗೆ ಆಧಾರ್ ಆಧಾರಿತ ವ್ಯವಸ್ಥೆಯ ಮೂಲಕ ವರ್ಗಾಯಿಸಲಾಗುತ್ತಿದೆ. ಬಹುತೇಕ ರೈತರು ತಮ್ಮ ಆಧಾರ್ ಕಾರ್ಡನ್ನು ಅಕೌಂಟ್ ನಂಬರ್‌ಗೆ ಲಿಂಕ್ ಮಾಡಿಲ್ಲ. ರೈತರು ತಮ್ಮ ತಮ್ಮ ಆಧಾರ್ ಕಾರ್ಡನ್ನು ತಾವು ಉಪಯೋಗಿಸುತ್ತಿರುವ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಮನವಿ ಮಾಡಿದರು. ಮೆಕ್ಕೆಜೋಳ ಹಾಗೂ ಹೂವುಬೆಳೆದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ಲೈನ್ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ.ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ತಲುಪಿದೆ. ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ. ಬದಲಾಗಿ ಏರ್‌ಟೇಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿದ್ದಾರೆ.ಹೀಗಾಗಿ ಏರ್‌ಟೇಲ್‌ ಪೇಮೆಂಟ್ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಹೋಗಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ವಿವರಣೆ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ರಾಜೀವ್  ಬಜಾಜ್  ರಾಹುಲ್ ಗಾಂಧಿ ವಿಡಿಯೋ ಕಾನ್ಫರೆನ್ಸ್

Thu Jun 4 , 2020
ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಹೇರಲಾಗಿರುವ ಸರಣಿ ಲಾಕ್‌ಡೌನ್ ವಿಫಲವಾಗಿದೆ ಎಂದು ಬಜಾಜ್ ಆಟೋ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಬಜಾಜ್ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ರಾಜೀವ್ ಬಜಾಜ್, ಲಾಕ್‌ಡೌನ್ ಹೇರಿಕೆ ಕೊರೊನಾ ವೈರಸ್‌ನ್ನು ನಿಯಂತ್ರಿಸುವ ಬದಲು ದೇಶದ ಅರ್ಥ ವ್ಯವಸ್ಥೆಯನ್ನು ಬಲಹೀನಗೊಳಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಲಾಕ್‌ಡೌನ್‌ನಿಂದ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿಲ್ಲ. ಭಾರತದ ಉತ್ಪಾದನಾ ವಲಯದ ಬಲ […]

Advertisement

Wordpress Social Share Plugin powered by Ultimatelysocial