ರೈಲು ಹತ್ತಲು ಸಹಕರಿಸಿದ ಪೊಲೀಸರು

ಪಶ್ಚಿಮ ಬಂಗಾಳ: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಶ್ರಮಿಕ್ ರೈಲುಗಳ ಮೂಲಕ ತೆರಳುತ್ತಿದ್ದಾರೆ. ಮುಂಬೈನಲ್ಲಿ ಪಶ್ಚಿಮ ಬಂಗಾಳಕ್ಕೆ ಹೊರಟ ರೈಲನ್ನು ಕೊನೆಕ್ಷಣದಲ್ಲಿ ಹತ್ತಲು ಬಂದ ಕಾರ್ಮಿಕರಿಗೆ ಪೊಲೀಸರು ಸಹಕರಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕೊನೆಕ್ಷಣದಲ್ಲಿ ವಲಸೆ ಕಾರ್ಮಿಕರ ಗುಂಪೊಂದು ರೈಲು ಹತ್ತಲು ಸಾಧ್ಯವಾಗಿರಲಿಲ್ಲ. ಈ ವೇಳೆ ಪೊಲೀಸರು ಓಡಿ ರೈಲ್ವೆ ಸಿಬ್ಬಂದಿ ಗಮನಕ್ಕೆ ತಂದು, ರೈಲು ನಿಲ್ಲಿಸಿ ಈ ಕಾರ್ಮಿಕರನ್ನೆಲ್ಲ ಹತ್ತಿಸಿ ಕಳಿಸಿದರು. ಪೊಲೀಸರ ಜತೆ ಅಲ್ಲಿದ್ದ ಒಂದಷ್ಟು ಸ್ವಯಂ ಸೇವಕರು ಘೋಷಣೆ ಹಾಕಿ ವಲಸೆ ಕಾರ್ಮಿಕರನ್ನು ಹು‌ರಿದುಂಬಿಸಿ ಕಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ರೈತರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಲು ಸೂಚನೆ

Thu Jun 4 , 2020
ಬೆಂಗಳೂರು : ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೊತೆಗೆ ರಾಜ್ಯ ಸರ್ಕಾರದ ಹಲವಾರು ಪ್ಯಾಕೇಜ್ ಸೇರಿದಂತೆ ಇನ್ನಿತ್ತರ ಪ್ರಯೋಜಗಳನ್ನು ಪಡೆದುಕೊಳ್ಳುವ ಸಲುವಾಗಿ ಕೂಡಲೇ ರೈತರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಕಾರ್ಡ್‌ ಅನ್ನು ಲಿಂಕ್‌ ಮಾಡುವಂತೆ ಸಚಿವ ಬಿ.ಸಿ ಪಾಟೀಲ್‌ ಅವರು ಮನವಿ ಮಾಡಿದ್ದಾರೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದ ರೈತರು ಶೀಘ್ರ ಜೋಡಣೆ‌ ಮಾಡಲು ಸಚಿವರು ಮನವಿ ಮಾಡಿದ್ದಾರೆ. ಮೆಕ್ಕೆಜೋಳ ಹಾಗೂ ಹೂವು ಬೆಳೆದ […]

Advertisement

Wordpress Social Share Plugin powered by Ultimatelysocial