ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ಧ ಅಧಿಕಾರಿ

ರಾವಂದೂರಿನ ಹಾಸ್ಟೆಲ್‌ ವಾರ್ಡ್‌ನ್ ಎಚ್.ರಾಜಯ್ಯ ಎಂಬುವವರಿಗೆ ನೀಡಲಾಗಿದ್ದ ಕಾರಣ ಕೇಳಿ ನೋಟಿಸು ವಾಪಸ್ ಪಡೆಯಲು ಹಾಗೂ ಹಾಸ್ಟೆಲ್‌ ಅನ್ನು ತಪಾಸಣೆ ನಡೆಸದಿರಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮುನಿರಾಜು ಅವರನ್ನು ಒಪ್ಪಿಸುವುದಾಗಿ ಹೇಳಿದ ದ್ವಿತೀಯ ದರ್ಜೆ ಗುಮಾಸ್ತ (ಎಸ್‌ಡಿಎ) ಶಿವಣ್ಣ ಅವರು ಒಟ್ಟು 1.5 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಮೊದಲೇ 50 ಸಾವಿರ ರೂ ಹಣವನ್ನು ರಾಜಯ್ಯ ನೀಡಿದ್ದರು. ಆದರೂ ಬಾಕಿ ಒಂದು ಲಕ್ಷ ಹಣ ನೀಡಲೇ ಬೇಕು ಎಂದು ಶಿವಣ್ಣ ಹಠ ಹಿಡಿದಾಗಿ ರಾಜಯ್ಯ ಎಸಿಬಿಯ ಮೊರೆ ಹೋದರು. ನಂತರ ಬಾಕಿ ಉಳಿದ ಒಂದು ಲಕ್ಷ ರೂ. ಹಣವನ್ನು ಪಡುವಾರಹಳ್ಳಿ ವೃತ್ತದಲ್ಲಿ ತೆಗೆದುಕೊಳ್ಳುವಾಗ ಶಿವಣ್ಣ ಅವರ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಗೆ ರಮೇಶ್ ಜಾರಕಿಹೊಳಿ/ ಹಾಸನಕ್ಕೆ ಕೆ. ಗೋಪಾಲಯ್ಯ

Tue Jun 2 , 2020
ಭಾರಿ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊನೆಗೂ ಜಲಸಂಪನ್ಮೂಲ ಖಾತೆ ಮಂತ್ರಿ ರಮೇಶ್ ಜಾರಕಿಹೊಳಿ ಪಾಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿಯನ್ನು ಕೆ. ಗೋಪಾಲಯ್ಯ ಅವರಿಗೆ ನೀಡಲಾಗಿದೆ. ಇಲ್ಲಿಯವರೆಗೆ ಜಗದೀಶ್ ಶೆಟ್ಟರ್ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ ಆ ಸ್ಥಾನಕ್ಕೆ ಜಾರಕಿಹೊಳಿ ಬಂದಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯಲ್ಲಿ ನಾಲ್ಕು ಜನ ಸಚಿವರಿದ್ದರೂ ಹೊರ ಜಿಲ್ಲೆಯವರಿಗೆ ಉಸ್ತುವಾರಿ ಹೊಣೆ ನೀಡಲಾಗಿತ್ತು. ಇನ್ನು ವಿವಾದಗಳ ಮೂಲಕ […]

Breaking News

Advertisement

Wordpress Social Share Plugin powered by Ultimatelysocial