ಲಾಕ್‌ಡೌನ್ ಸಡಿಲಿಕೆ ದುರಂತಕ್ಕೆ ಆಹ್ವಾನ: ಎಚ್.ಕೆ. ಪಾಟೀಲ

ಬೆಂಗಳೂರು: ಲಾಕ್‌ಡೌನ್ ಸಡಿಲಿಕೆಯಂಥ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವನ ಪರ ಇಲ್ಲ. ಇಂತಹ ನಿರ್ಣಯಗಳಿಂದ ಕರ್ನಾಟಕಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ ಅಪಕೀರ್ತಿಗೆ ಪಾತ್ರರಾಗುತ್ತೀರಿ, ತಕ್ಷಣ ದುರಂತವನ್ನು ಆಹ್ವಾನಿಸುವ ನಿರ್ಣಯವನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಎಚ್.ಕೆ ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.
ಲಾಕ್‌ಡೌನ್ ಸಡಿಲಿಕೆ ಅಂತ ತೀರ್ಮಾನ ಜನತೆಯ ಸರ್ವಾಂಗೀಣ ಹಿತವನ್ನೂ ಸಂಪೂರ್ಣವಾಗಿ ಪರಿಗಣಿಸಿ ಸರ್ವಸಮ್ಮತವಾಗುವ ರೀತಿಯಲ್ಲಿ ನಿರ್ಣಯ ಕೈಗೊಳ್ಳಬೇಕಾದುದ್ದು ಸರ್ಕಾರದ ಕರ್ತವ್ಯವಾಗಿತ್ತು. ಆದರೆ ಸಂಪೂರ್ಣ ಲಾಕ್‌ಡೌನ್ ಅನ್ನು ಸಡಿಲಗೊಳಿಸಿ ಬೆಂಗಳೂರಿನಂಥ ರೆಡ್ ಆಲರ್ಟ್ ಪ್ರದೇಶದಲ್ಲಿಯೇ ಹತ್ತಾರು ಲಕ್ಷ ವಾಹನಗಳ ಸಂಚಾರಕ್ಕೆ ಅನುಮತಿ ನಿಡಲಾಗಿದೆ ಇದು ಸರಿಯಲ್ಲ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪಾದಾರಯನಪುರದಲ್ಲಿ ಡ್ಯೂಟಿ ಮಾಡಿದ ಪೊಲೀಸರು ಕ್ವಾರಂಟೈನ್

Sat Apr 25 , 2020
ಬೆಂಗಳೂರು : ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಲ್ಲಿ 5 ಮಂದಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ನೂರಾರು ಪೊಲೀಸರನ್ನು ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ..ಪೊಲೀಸ್ ಕಮೀಷನರ್ ಆದೇಶದಂತೆ ಕ್ವಾರಂಟೈನ್ ಮಾಡಲಾಗುತ್ತಿದೆ.ಜೆ.ಜೆ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ನಂತರ ಆರೋಪಿಗಳನ್ನು ಪಶ್ಚಿಮ ವಿಭಾಗ ಪೊಲೀಸರು ಹಾಗೂ ಸಿಸಿಬಿ ಪೊಲೀಸರ ನೂರಾರು ತಂಡ ಬಂಧಿಸಿದ್ರು.ಈಗ ಆರೋಪಿಗಳಲ್ಲಿ ಸೋಂಕು ಧೃಡಪಟ್ಟಿದ್ದು,ಆರೋಪಿಗಳ ಪ್ರೈಮರಿ ಕಾಂಟ್ಯಾಕ್ಟ್ ಹೊಂದಿದ್ದ 23 ಪೊಲೀಸ್ ಅಧಿಕಾರಿಗಳು,ನೂರಾರು ಪೊಲೀಸರನ್ನು ಖಾಸಗಿ ಹೊಟೇಲ್ ನಲ್ಲಿ […]

Advertisement

Wordpress Social Share Plugin powered by Ultimatelysocial