ವೃತ್ತಿಪರರು,ರೈತರು, ಸಂಕಷ್ಟದಲ್ಲಿದ್ದಾರೆ :ಡಿಕೆಶಿ

ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡಲೇ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ  ಅವರು, ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು. ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ ಅಗತ್ಯವಿದೆ. ಹೀಗಾಗಿ ಈ ಅಧಿವೇಶನ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಲಿದೆ. ದೇಶ ಕಟ್ಟುತ್ತಿರುವ ನಮ್ಮ ಸೋದರ, ಸೋದರಿಯರ ಹಿತ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕಾರ್ಮಿಕರ ಪರ ಗುಡುಗಿದ ಸಿದ್ದರಾಮಯ್ಯ

Wed May 6 , 2020
ಸ್ವಂತ ಊರುಗಳಿಗೆ ಹೋಗುವ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉದ್ಯೋಗ ಕಾರ್ಡ್ ಒದಗಿಸಿ ಕೆಲಸ ನೀಡಬೇಕು ಎಂದು ಮಾಜಿ ಸಿಎಂ, ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಅವರು, ಇನ್ನಾದರೂ ರಾಜ್ಯ ಸರ್ಕಾರ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ, ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಹೋಗುವವರು, ಬರುವವರಿಗೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಿಸಿ, ಅಗತ್ಯವೆನಿಸಿದರೆ ಕ್ವಾರಂಟೈನ್‍ಗೆ ಒಳಪಡಿಸಿ. ಸ್ವಂತ ಊರುಗಳಿಗೆ […]

Advertisement

Wordpress Social Share Plugin powered by Ultimatelysocial