ಶ್ವಾನ ಪಡೆಯ ಚಟುವಟಿಕೆ ಉದ್ಯಾನ ಆರಂಭ

ಬೆಂಗಳೂರಿನ ಅಡುಗೋಡಿ ಸಿಎಆರ್ ಮೈದಾನದಲ್ಲಿ ಶ್ವಾನ ದಳದ ಚಟುವಟಿಕೆಗೆಂದೇ ಆಧುನಿಕ ಉದ್ಯಾನವನ ನಿರ್ಮಿಸಲಾಗಿದೆ. ಅಪರಾಧ ಪ್ರಕರಣ ಪತ್ತೆ, ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಗಾಗಿ ಶ್ವಾನ ದಳವನ್ನು ಮತ್ತಷ್ಟು ಚುರುಕುಗೊಳಿಸಲು ಇಲ್ಲಿಂದ್ದ ಮೊದಲಿದ್ದ ಉದ್ಯಾನವನ್ನೇ ನವೀಕರಿಸಲಾಗಿದೆ ಎಂದು ಉದ್ಯಾನ ಉದ್ಘಾಟಿಸಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ. ಪೊಲೀಸ್‌ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2.5 ಕೋಟಿ ವೆಚ್ಚದಲ್ಲಿ 50 ಶ್ವಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು. ಸ್ಪೋಟಕ ವಸ್ತುಗಳನ್ನು, ಡ್ರಗ್ಸ್‌ಗಳನ್ನು ಪತ್ತೆಹಚ್ಚುವ ಹಾಗೂ ಅಪರಾಧ ಸ್ಥಳದಲ್ಲಿ ಅಪರಾಧಿಯನ್ನು ಪತ್ತೆಹಚ್ಚುವಲ್ಲಿ ನಮ್ಮ ಇಲಾಖೆಯ ಶ್ವಾನಗಳು ಬಹಳ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ತಂಡವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವುಗಳಿಗೆ ಅತ್ಯುತ್ತಮ ತರಬೇತಿ ನೀಡುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಸಿಎಆರ್‌ (ದಕ್ಷಿಣ) ನಲ್ಲಿ ಡಿಸಿಪಿ ಯೋಗೇಶ್‌ ಹಾಗೂ ಎಸಿಪಿ ನಿಂಗಾರೆಡ್ಡಿ ಪಾಟೀಲ್‌ ಅವರ ನೇತೃತ್ವದಲ್ಲಿ ಶ್ವಾನ ಚಟುವಟಿಕೆಯ ಉದ್ಯಾನವನ್ನು ಉನ್ನತೀಕರಿಸಲಾಗಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

 ವಿಶ್ವ ಸಂಸ್ಥೆ ಅವಾರ್ಡ್ ಗೆ ಭಾರತೀಯ ಮೇಜರ್  ಸುಮನ್ ಆಯ್ಕೆ

Tue May 26 , 2020
ನವದೆಹಲಿ: ಸೇನಾ ಲಿಂಗಸಮಾನತೆ ಪ್ರತಿಪಾದನೆಗಾಗಿ ವಿಶ್ವಸಂಸ್ಥೆಯಿಂದ ಕೊಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಇದೇ ಮೊದಲ ಬಾರಿಗೆ ಭಾರತೀಯರೊಬ್ಬರಾದ  ಮೇಜರ್ ಸುಮನ್ ಗವಾನಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಸುಮನ್​ ಅವರನ್ನು ಹೊರತುಪಡಿಸಿದರೆ ಇನ್ನೋರ್ವರು ಬ್ರೆಜಿಲ್​ನ ನೌಕಾಪಡೆ ಅಧಿಕಾರಿ ಕಾರ್ಲಾ ಮಾಂಟೆರೋ ಡಿ ಕ್ಯಾಸ್ಟ್ರೊ ಅರೌಜೊ ಅವರು ಆಯ್ಕೆಯಾಗಿದ್ದಾರೆ.   ಇದೇ ಮೊದಲ ಬಾರಿಗೆ ಇಬ್ಬರಿಗೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು 2016ರಲ್ಲಿ ಸ್ಥಾಪಿಸಲಾಗಿದೆ. ಶಾಂತಿ ಕಾರ್ಯಾಚರಣೆ ಸಂದರ್ಭದಲ್ಲಿ ಮಹಿಳೆ, ಶಾಂತಿ ಹಾಗೂ […]

Advertisement

Wordpress Social Share Plugin powered by Ultimatelysocial