ಚಿತ್ರಮಂದಿರಗಳಲ್ಲಿ ಸಿನಿಮಾ ಆರಂಭಿಸಲು ಅನುಮತಿ, ಚಿತ್ರರಂಗಕ್ಕೆ ಪ್ರತ್ಯೇಕ ಪ್ಯಾಕೇಜ್ ನೀಡುವುದು ಸೇರಿದಂತೆ ಅನೇಕ ಮನವಿಗಳನ್ನು ಸಲ್ಲಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ನಟ ಶಿವರಾಜ್ ಕುಮಾರ್ ಭೇಟಿ ಆಗಬೇಕಿತ್ತು. ಆದರೆ ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ವರದಿಯ ಕಾರಣ ಕರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಚಿತ್ರ ಪ್ರರ್ಶನಗಳು ಸ್ಥಗಿತ ಆಗಿರುವುದರಿಂದ ಚಿತ್ರರಂಗಕ್ಕೆ ಯಾವೆಲ್ಲ ತೊಂದರೆಗಳಾಗಿವೆ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ. ಈ ವಿಚಾರಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ, ಮನವಿ ಸಲ್ಲಿಸಲು ಭೇಟಿಗೆ ಸಮಯ ನಿಗದಿ ಆಗಿತ್ತು. ಸದ್ಯ ಆ ಭೇಟಿಯನ್ನು ಮುಂದೂಡಲಾಗಿದೆ. ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ಅವರು ಕ್ವಾರಂಟೈನ್ ಆಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸಿಎಂ ಭೇಟಿ ರದ್ದುಗೊಳಿಸಿದ ಶಿವರಾಜ್ ಕುಮಾರ್
Please follow and like us: