ರಾಜ್ಯ ಕಾಂಗ್ರೆಸ್ನಲ್ಲಿ ಎರಡು ಶಕ್ತಿ ಕೇಂದ್ರಗಳ ನಡುವೆ ತಿಕ್ಕಾಟ ಶುರುವಾಗಿದೆ. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೀತಿದೆ. ಪಕ್ಷದ ಮೇಲೆ ಹಿಡಿತ ಸಾಧಿಸಲು ಉಭಯ ನಾಯಕರ ನಡುವೆ ತೆರೆಮರೆ ನಡುವೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗ್ತಿದೆ.ಪದಾಧಿಕಾರಿಗಳ ನೇಮಕ ಸೇರಿದಂತೆ ಹಲವು ವಿಚಾರಗಳಲ್ಲಿ ಇಬ್ಬರು ನಾಯಕರ ನಡುವೆ ಮನಸ್ತಾಪ ಇರೋದು ಈಗಾಗಲೇ ಬಹಿರಂಗವಾಗಿದೆ. ತಮ್ಮ ಬೆಂಬಲಿಗರಿಗೆ ಪದಾಧಿಕಾರಿಗಳ ನೇಮಕದಲ್ಲಿ ಅವಕಾಶ ನೀಡಲು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮೈಗಾಫೈಟ್ ನಡೆಸಿದ್ದಾರೆ. ಮತ್ತೊಮ್ಮೆ ಸಿಎಂ ಕನಸಿನೊಂದಿಗೆ ಪಕ್ಷದ ಮೇಲಿನ ಹಿಡಿತ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪೈಪೋಟಿ ನಡೆಸ್ತಿದಾರೆ. ಆದರೆ ಪಕ್ಷದಲ್ಲಿನ ಸಿದ್ದರಾಮಯ್ಯ ಪ್ರಭಾವ ಕುಗ್ಗಿಸಿ ತನ್ನ ವರ್ಚಸ್ಸನ್ನ ಹೆಚ್ಚಿಸಿಕೊಳ್ಳಲು ಡಿಕೆಶಿ ಹರಸಾಹಸ ಪಡುತ್ತಿದ್ದಾರೆ.
ಸಿದ್ದರಾಮಯ್ಯ ಡಿಕೆಶಿ ನಡುವೆ ಮೆಗಾಫೈಟ್
Please follow and like us: