ಸಿಬಿಐ ವಶಕ್ಕೆ ಡಿಎಚ್ ಎಫ್ ಎಲ್ ಪ್ರವರ್ತಕರು

ಮುಂಬೈ: ಯೆಸ್ ಬ್ಯಾಂಕ್- ಡಿಎಚ್ ಎಫ್ ಎಲ್ ವಂಚನೆ ಪ್ರಕರಣದಲ್ಲಿ ಆರೋಪಿಗಳಾದ ಡಿಎಚ್ ಎಫ್ ಎಲ್ ಪ್ರಮೋರ‍್ರಾದ ಕಪಿಲ್ ಹಾಗೂ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ವಶಕ್ಕೆ ಪಡೆಯಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಭಾನುವಾರ ಹೇಳಿದ್ದಾರೆ. ಸಿಬಿಐ ತಂಡವು ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಸತಾರಾ ಪೊಲೀಸರು ಅವರಿಗೆ ಎಲ್ಲ ಅಗತ್ಯ ನೆರವು ನೀಡಿದ್ದಾರೆ. ಲಿಖಿತವಾಗಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಬೆಂಗಾವಲು ವಾಹನ ಮತ್ತು ಹದಿಮೂರು ಮಂದಿ ಭದ್ರತಾ ಸಿಬ್ಬಂದಿ ಜತೆಗೆ ಮುಂಬೈನ ತನಕ ಬಿಡಲಾಗಿದೆ. ಬಂಧನದ ಪ್ರಕ್ರಿಯೆಗಳು ನಡೆಯುತ್ತಿವೆ. ಕಾನೂನು ಎಲ್ಲರಿಗೂ ಒಂದೇ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ವುಹಾನ್‌ನಲ್ಲಿ ಕೋವಿಡ್ ವೈರಸ್ ಪತ್ತೆಯೇ ಇಲ್ಲ

Sun Apr 26 , 2020
ಚೀನಾ: ಜಾಗತಿಕ ಮಹಾಮಾರಿ ಕೊರೊನಾ ವೈರಸ್‌ನ ಉಗಮ ಸ್ಥಾನ ವುಹಾನ್‌ನ ಯಾವುದೇ ಆಸ್ಪತ್ರೆಯಲ್ಲೂ ಈಗ ಕೊರೊನಾ ವೈರಸ್‌ನ ಸೋಂಕಿತರಿಲ್ಲ. ಎಲ್ಲರನ್ನೂ ಬಿಡುಗಡೆ ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಏ. ೨೬ರ ಹೊತ್ತಿಗೆ ವುಹಾನ್‌ನಲ್ಲಿ ಯಾವುದೇ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ. ಪರಿಸ್ಥಿತಿಯನ್ನು ಈ ಹಂತಕ್ಕೆ ನಿಯಂತ್ರಿಸಲು ಶ್ರಮಿಸಿದ ವುಹಾನ್ ಮತ್ತು ಅಲ್ಲಿನ ಆರೋಗ್ಯ ಸಿಬ್ಬಂದಿಗೆ ಧನ್ಯವಾದಗಳು ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ವಕ್ತಾರ ಮಿ ಫೆಂಗ್ ಹೇಳಿದ್ದಾರೆ. Please […]

Advertisement

Wordpress Social Share Plugin powered by Ultimatelysocial