ಸೆಂಟ್ರಲ್ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರ ಮಾಡುವುದಾದಲ್ಲಿ ಮೊದಲಿಗೆ ಅಲ್ಲಿ ಸರಿಯಾದ ಮೂಲಭೂತ ಸೌಕರ್ಯ ಗಳ ವ್ಯವಸ್ಥೆ ಮಾಡಲಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಸ್ಥಳಾಂತರ ಮಾಡುವ ಸಂದರ್ಭ ನಮ್ಮನ್ನು ಕರೆಯದೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಸಭೆ ಮಾಡಿದ್ದರು. ಆದರೆ ಇದೀಗ ವ್ಯಾಪಾರಿಗಳಿಗೆ ಸಮಸ್ಯೆಗಳು ತಲೆದೋರಿರುವ ಸಂದರ್ಭದಲ್ಲಿ ಯಾರೂ ಇತ್ತ ತಲೆಹಾಕುತ್ತಿಲ್ಲ. ಸೆಂಟ್ರಲ್ ಮಾರುಕಟ್ಟೆ ಸ್ಥಳಾಂತರ ದಿಂದ ವ್ಯಾಪಾರಿಗಳು ಮಾತ್ರವಲ್ಲ ಜನಸಾಮಾನ್ಯರಿಗೂ ಸಮಸ್ಯೆಯಾಗಿದೆ. ಆದ್ದರಿಂದ ಶಾಸಕರು, ಸಂಸದರು, ಉಸ್ತುವಾರಿ ಸಚಿವರು ತಕ್ಷಣ ಈ ಸಮಸ್ಯೆಯನ್ನು ಬಗೆಹರಿಸಲಿ ಎಂದು ಹೇಳಿದರು
ಸೆಂಟ್ರಲ್ ಮಾರುಕಟ್ಟೆ ಗೊಂದಲವನ್ನು ಬಗೆಹರಿಸಲಿ
Please follow and like us: