ದೆಹಲಿ: ಲಾಕ್ಡೌನ್ ಕಾರಣಕ್ಕಾಗಿ ಮಾವಿನ ಹಣ್ಣುಗಳನ್ನು ಸವಿಯುವ ಅವಕಾಶ ಕಳೆದುಕೊಳ್ಳಲಿದ್ದ ಉತ್ತರ ಭಾರತದ ಜನರಿಗೆ ರೈಲ್ವೆ ಸಚಿವಾಲಯ ಮಾವಿನ ಹಣ್ಣುಗಳನ್ನು ತಲುಪಿಸಲು ವಿಶೇಷ ಸರಕು ಸಾಗಾಣಿಕೆ ರೈಲುಗಳ ವ್ಯವಸ್ಥೆ ಮಾಡಿದೆ. ದಕ್ಷಿಣ ಭಾರತದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಮಹಾರಾಷ್ಟçದಿಂದ ಹೆಚ್ಚಿನ ಪ್ರಮಾಣದಲ್ಲಿ ಮಾವಿನ ಹಣ್ಣುಗಳನ್ನು ಈ ರೈಲುಗಳ ಮೂಲಕ ತಲುಪಿಸಲಿದೆ.ಮಾವಿನ ಹಣ್ಣಿನ ಜೊತೆಗೆ ಕಿತ್ತಳೆ, ದ್ರಾಕ್ಷಿ, ಬಾಳೆಹಣ್ಣು ಹಾಗೂ ದಾಳಿಂಬೆ ಹಣ್ಣುಗಳನ್ನು ವಿಶೇಷ ರೈಲುಗಳ ಮೂಲಕ ದೆಹಲಿ ಹಾಗೂ ದೇಶದ ಇತರೆ ಮಾರುಕಟ್ಟೆಗಳಿಗೆ ತಲುಪಿಸಲಾಗಿದೆ.
ಲಾಕ್ಡೌನ್ ಕಾರಣಕ್ಕಾಗಿ ಪ್ರಯಾಣಿಕರ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಅಗತ್ಯ ಸರಕುಗಳನ್ನು ಸಾಗಿಸಲು ಸರಕು ಸಾಗಾಣಿಕೆ ರೈಲುಗಳು ಮಾತ್ರ ಸಂಚರಿಸುತ್ತಿವೆ. ಬಡವರಿಗೆ ಸಾರ್ವಜನಿಕ ವಿತರಣೆ ವ್ಯವಸ್ಥೆ ಮೂಲಕ ಅಕ್ಕಿ, ಗೋಧಿ ದ್ವಿದಳ ಧಾನ್ಯಗಳನ್ನು ವಿತರಿಸಲು ೫೫ ಅನ್ನಪೂರ್ಣಾ ರೈಲುಗಳು ಹಾಗೂ ಸುಮಾರು ೫೦೦ಕ್ಕೂ ಹೆಚ್ಚು ವಿಶೇಷ ರೈಲುಗಳು, ೮ ಜೈಕಿಸಾನ್ ರೈಲುಗಳು ಸಂಚರಿಸುತ್ತವೆ.
ಹಣ್ಣುಗಳ ಸಾಗಾಣಿಕೆಗೆ ವಿಶೇಷ ರೈಲು
Please follow and like us: