ದುಡಿಯುವ ವರ್ಗಕ್ಕೆ ಪ್ಯಾಕೇಜ್ ಘೋಷಣೆಗೆ ಕಾಂಗ್ರೆಸ್ ಈ ಹಿಂದೆಯೇ ಸರ್ಕಾರಕ್ಕೆ ಆಗ್ರಹಿಸಿತ್ತು ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಶ್ರಮಿಕವರ್ಗಕ್ಕೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ ಹಿನ್ನೆಲೆಯಾಗಿ ಮಂಗಳೂರಿನಲ್ಲಿ ಮಾತನಾಡಿದ ಅವರು, ಬೀಡಿ ಕಾರ್ಮಿಕರು,ಟೈಲರ್, ಹೊಟೇಲ್ ಕಾರ್ಮಿಕರು, ಬಸ್ ಚಾಲಕ ನಿರ್ವಾಹಕರನ್ನು ಈ ಪ್ಯಾಕೇಜ್ ನಿಂದ ಕೈ ಬಿಟ್ಟಿದ್ದಾರೆ. ಫೋಟೋಗ್ರಾಫರ್ ಗಳನ್ನೂ ಸರ್ಕಾರ ಗಣನೆಗೆ ತೆಗೆದುಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿ ಗೆ ಮನವಿ ಸಲ್ಲಿಸುತ್ತೇವೆ ಎಂದರು. ಇನ್ನೂ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರ ಪರದಾಟ ಹಿನ್ನಲೆ ಪ್ರತಿಕ್ರಿಯಸಿದ ಅವರು, ಬೇರೆ ಎಲ್ಲಾ ರಾಜ್ಯದಿಂದ ಉತ್ತರ ಭಾರತದ ಕಡೆಗೆ ರೈಲು ಹೋಗುತ್ತದೆ. ಆದರೆ ನಮ್ಮ ರಾಜ್ಯದಿಂದ ಇನ್ನೂ ರೈಲುಗಳ ಸಂಚಾರ ಆರಂಭವಾಗಿಲ್ಲ. ಇದೇ ರೀತಿ ಆದ್ರೆ ಕಾರ್ಮಿಕರು ಮತ್ತೆ ರಾಜ್ಯಕ್ಕೆ ಬರಲ್ಲ. ರಾಜ್ಯದ ಸಹವಾಸ ಸಾಕು ಅಂತಾ ಹೋಗುತ್ತಾರೆ. ಹಸಿವಿನಿಂದ ಜನ ರೈಲ್ವೇ ನಿಲ್ದಾಣ ಮುಂದೆ ಇದ್ದಾರೆ. ಆದ್ರೆ ಜನಪ್ರತಿನಿಧಿಗಳು ಮಾತ್ರ ಸಮಸ್ಯೆ ಕೇಳಿತ್ತಿಲ್ಲ. ಕಾರ್ಮಿಕರನ್ನು ಕಳುಹಿಸದೆ ಸತಾಯಿಸಲಾಗುತ್ತಿದೆ. ಇದು ಮಾನವ ಹಕ್ಕು ಉಲ್ಲಂಘನೆ ಎಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದರು.
ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ