ಬೆಂಗಳೂರು: ಕಾರಾಗೃಹಕ್ಕೆ ಬರುವ ಹೊಸ ಕೈದಿಗಳಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಎಂದು ರಾಜ್ಯ ಕಾರಾಗೃಹ ಇಲಾಖೆ ತಿಳಿಸಿದೆ. ಜೈಲಿಗೆ ಬರುತ್ತಿದ್ದಂತೆಯೇ ಕೈದಿಯನ್ನು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿರಿಸಲಾಗುತ್ತಿದೆ. ಪರೀಕ್ಷೆಯಲ್ಲಿ ಸೋಂಕು ಇಲ್ಲ ಎಂದು ದೃಢಪಟ್ಟ ಬಳಿಕವಷ್ಟೇ ಜೈಲಿನೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದೆ.
Please follow and like us:
Thu May 28 , 2020
ನವದೆಹಲಿ: ವಿಯೆಟ್ನಾಂನಲ್ಲಿ 9ನೇ ಶತಮಾನದ ಶಿವಲಿಂಗ ಪತ್ತೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ವಿಯೆಟ್ನಾಂನ ಮೈಸನ್ ಪ್ರದೇಶದಲ್ಲಿ ಉತ್ಖನನ ನಡೆಸುವಾಗ ಈ ವಿಶಿಷ್ಟ ಶಿವಲಿಗವನ್ನು ಭಾರತದ ಪುರಾತತ್ವ ಇಲಾಖೆ(ASI) ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಮೈಸನ್ ಪ್ರದೇಶದ ಚಾಮ್ ದೇಗುಲಗಳ ಸಮೂಹದಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದೆ. ಇಲ್ಲಿ ಅನೇಕ ಶಿಥಿಲವಾಸ್ಥೆ, ಪೂರ್ಣ ಹಾಳಾದ ದೇಗುಲಗಳ ಅವಶೇಷಗಳಿವೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿರುವ ಈ ತಾಣವನ್ನು ಕ್ರಿ.ಶ 4ನೇ ಶತಮಾನದಿಂದ […]