ಹೈದರಾಬಾದ್ : ಶ್ರೀರಾಮಾನುಜಾಚಾರ್ಯರ ಸಹಸ್ರಮಾನೋತ್ಸವ ಪ್ರಯುಕ್ತ ಇಂದು ಹೈದರಾಬಾದ್ನ ಮುಚ್ಚಿಂತಲ್ನಲ್ಲಿ ಅದ್ಧೂರಿಯಾಗಿ ಶೋಭಾಯಾತ್ರೆ ನೆರವೇರಿತು.ಈ ಶೋಭಾಯಾತ್ರೆಯಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿದ್ದು, 5 ಸಾವಿರಕ್ಕೂ ಹೆಚ್ಚು ವೇದಪಂಡಿತರಿಂದ ಮಂತ್ರಪಠಣ ಮಾಡಲಾಯ್ತು.ಶ್ರೀ ತ್ರಿದಂಡ ಚಿನ್ನಜೀಯರ್ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದು, ಸಂಜೆ 5.30ಕ್ಕೆ ವಿಷ್ಣು ಸಹಸ್ರನಾಮ ಪಾರಾಯಣ ಆರಂಭವಾಗಲಿದೆ. ಇನ್ನು ಸಂಜೆ 6 ಗಂಟೆಗೆ ಶ್ರೀಲಕ್ಷ್ಮೀನಾರಾಯಣ ಮಹಾಯಾಗ ನಡೆಯಲಿದೆ.ಅಂದ್ಹಾಗೆ, ಇಂದಿನಿಂದ ಫೆಬ್ರವರಿ 14ರವರೆಗೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಇಂದು ಅದ್ಧೂರಿಯಾಗಿ ಶೋಭಾಯಾತ್ರೆ ನೆರವೇರಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada