ಬಿಡದಿ(ರಾಮನಗರ): ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಪಟ್ಟ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯು ಅಧ್ಯಕ್ಷೆ ಎಸ್.ವರಲಕ್ಷ್ಮೀ ನೇತೃತ್ವದಲ್ಲಿ ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಎಚ್ಡಿಕೆ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು.ಬಳಿಕ ಮಾತನಾಡಿದ ಎಚ್ಡಿಕೆ, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲಳು ಪ್ರಸ್ತಾಪಿಸುವೆ ಎಂದರು.ಅನೇಕ ವರ್ಷದಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯದಲ್ಲಿ 47.37 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆ ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರ ನಿರ್ಲಕ್ಷ್ಯ ಸಲ್ಲ. ಗೌರವಧನ ಹೆಚ್ಚಿಸುವ ಜತೆಗೆ, ಎನ್ಪಿಎಸ್ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕಾಗಿ ಬಜೆಟ್ನಲ್ಲಿ 339.49 ಲಕ್ಷ ರೂ. ಮೀಸಲಿಡಬೇಕು ಎಂದು ಸರ್ಕಾರವನ್ನ ಎಚ್ಡಿಕೆ ಆಗ್ರಹಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada