ಅಂಭಿ ಅಭಿಮಾನಿಗಳಿಗೆ ಖುಷಿ ಸುದ್ದಿ

ಖ್ಯಾತ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದೆ. ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿನೆ ನೀಡಿದರು. ಹಾಗೆಯೇ ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು 5 ಕೋಟಿ ಒದಗಿಸಲಿದೆ, ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು. ಅಲ್ಲದೆ, ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಸೂಚಿಸಿದರು. ಇನ್ನೂ ಈ ಸಂಧರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ್, ನಟ ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಎಂ. ಮಹೇಶ್ವರರಾವ್, ಆಯುಕ್ತ ಡಾ. ಪಿ.ಎಸ್. ಹರ್ಷ ಭಾಗವಹಿಸಿದ್ದರು.

 

 

Please follow and like us:

Leave a Reply

Your email address will not be published. Required fields are marked *

Next Post

ಕೊಳವೆ ಬಾವಿಗೆ ಬಿದ್ದ ಮೇಕೆಮರಿ

Mon Jun 29 , 2020
ಕೊಳವೆ ಬಾವಿಯೊಂದಕ್ಕೆ ಬಿದ್ದ ಮೇಕೆ ಮರಿಯನ್ನು ದೇಶೀ ಶೈಲಿಯಲ್ಲಿ ಬಚಾವ್ ಮಾಡಲು ಮುಂದಾದ ನಾಲ್ವರ ಸಾಹಸವು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಹೌದು ಮೇಕೆ ಮರಿಯನ್ನು ರಕ್ಷಿಸಲು ಖುದ್ದು ಮುಂದಾಗುವ ಈ ನಾಲ್ವರ ಪೈಕಿ ಒಬ್ಬರು ತಾವೇ ಆ ಕೊಳವೆ ಬಾವಿಗೆ ತಮ್ಮ ಅರ್ಧಕ್ಕಿಂತ ಹೆಚ್ಚಿನ ಭಾಗದ ದೇಹವನ್ನು ಉಲ್ಟಾಮಾಡಿ ಒಳಗೆ ತೂರಿಸುತ್ತಾರೆ. ಈ ವೇಳೆ ಅವರ ಕಾಲುಗಳನ್ನು ಜೊತೆಗಿದ್ದ ಮೂವರು ಹಿಡಿದುಕೊಳ್ಳುತ್ತಾರೆ. ನಂತರ ಕೊಳವೆ ಬಾವಿಯೊಳಗೆ ತೂರಿಕೊಂಡ ಈ ವ್ಯಕ್ತಿ […]

Advertisement

Wordpress Social Share Plugin powered by Ultimatelysocial