ಅಕ್ರಮವಾಗಿ ಗಾಂಜಾ ಸಾಗಣೆ

ಔರಾದ ತಾಲೂಕಿನ ಜಂಬಗಿ ಗ್ರಾಮದ ಭವಾನಿ ಡಾಬಾ ಹತ್ತಿರ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. 4.40ಲಕ್ಷ ರೂ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಸಾಗಿಸುತ್ತಿದ್ದವರಲ್ಲಿ ಇನ್ನಿಬ್ಬರು ಪರಾರಿಯಾಗಿದ್ದಾರೆ. ಬೈಕ್ ಗಳಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದು ಡಿವೈಎಸ್ ಪಿ.ಡಾ ದೇವರಾಜ್ ನೇತೃತ್ವದ ತಂಡ ದಾಳಿ ನಡೆಸಿದೆ. ಇದರಲ್ಲಿ ಶಿವಾಜಿ ರಾಥೋಡ್  ಎಂಬಾತನನ್ನು ಬಂಧಿಸಿದ್ದು, ಪ್ರಕಾಶ್ ,ರಂಗಲಾಲ್ ಎಂಬುವವರು  ಪರಾರಿಯಾಗಿದ್ದಾರೆ. ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಲೋಕಾಯುಕ್ತ ಭದ್ರತಾ ಸಿಬ್ಬಂದಿಗೆ ಕೊರೊನಾ

Thu Jul 2 , 2020
ಲೋಕಾಯುಕ್ತ ಸಂಸ್ಥೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಕೆಎಸ್‌ಆರ್‌ಪಿಯ ಇಬ್ಬರು ಕಾನ್‌ಸ್ಟೆಬಲ್‌ಗಳಿಗೆ ಸೋಂಕು ದೃಢವಾಗಿದೆ. ಈ ಹಿನ್ನಲೆ ಲೋಕಾಯುಕ್ತ ಸಂಸ್ಥೆಯನ್ನು ೩ದಿನ ಸೀಲ್‌ಡೌನ್ ಮಾಡಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ವೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಪೊಲೀಸ್ ಕಾನ್‌ಸ್ಟೆಬಲ್‌ಗೆ ಕೋವಿಡ್ ೧೯ ಕಾಣಿಸಿಕೊಂಡಿದ್ದು, ಈ ಕಾನ್‌ಸ್ಟೆಬಲ್ ಲೋಕಾಯುಕ್ತ ಸಂಸ್ಥೆಗೂ ಬಂದಿದ್ದರು.ಹೀಗಾಗಿ ಇಬ್ಬರಿಗೆ ಸೋಂಕು ತಗುಲಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ೩೦ ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಹಾಗೂ ಇನ್‌ಸ್ಪೆಕ್ಟರ್ ಈಗಾಗಲೇ […]

Advertisement

Wordpress Social Share Plugin powered by Ultimatelysocial