ರಾಜಸ್ಥಾನ ರಾಜಕಾರಣ ದಿನೇ ದಿನೇ ತಿರುವುಪಡೆದುಕೊಳ್ಳುತ್ತಿದೆ.ಅಶೋಕ್ ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲೆಟ್ ತನ್ನ ೧೮ಜನ ಬೆಂಬಲಿಗರ ಜೊತೆ ಸೇರಿ ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಕಾಂಗ್ರೆಸ್ ಹೈ ಕಮಾಂಡ್ ನ ಯಾವ ಒಂದು ಆದೇಶಕ್ಕೂ ಕ್ಯಾರೆ ಎನ್ನದೆ ತನ್ನದೆ ದಾರಿಯಲ್ಲಿ ಹೊಗುತ್ತಿದ್ದಾರೆ.ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಅಶೋಕ್ ಗೆಹ್ಲೋಟ್ ರಾಜಸ್ಥಾನ ವಿಧಾನಸಭೆಯ ಅಧಿವೇಶವನ್ನು ಕರೆಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿ ಹೊಸ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿದಾರೆ. ವಿಶ್ವಾಸಮತ ಸಾಬೀತುಪಡಿಸಲು ಅನುವಾಗುವಂತೆ ಅಧಿವೇಶನ ಕರೆಯಬೇಕು ಎಂದು ಕಾಂಗ್ರೆಸ್ ಪಟ್ಟುಹಿಡಿದಿದೆ.ಈ ವಿಷಯ ಕುರಿತು ಸ್ಪೀಕರ್ ಅವರು ಪೈಲೆಟ್ ಮತ್ತು ೧೮ ಶಾಸಕರಿಗೆ ನೀಡಿದ್ದ ಅನರ್ಹತೆ ನೋಟಿಸ್ ಸಂಬ0ಧ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದರು.
ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲು ನಿರ್ಧಾರ
Please follow and like us: