ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲು ನಿರ್ಧಾರ

ರಾಜಸ್ಥಾನ ರಾಜಕಾರಣ ದಿನೇ ದಿನೇ ತಿರುವುಪಡೆದುಕೊಳ್ಳುತ್ತಿದೆ.ಅಶೋಕ್ ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲೆಟ್ ತನ್ನ ೧೮ಜನ ಬೆಂಬಲಿಗರ ಜೊತೆ ಸೇರಿ ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಕಾಂಗ್ರೆಸ್ ಹೈ ಕಮಾಂಡ್ ನ ಯಾವ ಒಂದು ಆದೇಶಕ್ಕೂ ಕ್ಯಾರೆ ಎನ್ನದೆ ತನ್ನದೆ ದಾರಿಯಲ್ಲಿ ಹೊಗುತ್ತಿದ್ದಾರೆ.ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಅಶೋಕ್ ಗೆಹ್ಲೋಟ್ ರಾಜಸ್ಥಾನ ವಿಧಾನಸಭೆಯ ಅಧಿವೇಶವನ್ನು ಕರೆಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿ ಹೊಸ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿದಾರೆ. ವಿಶ್ವಾಸಮತ ಸಾಬೀತುಪಡಿಸಲು ಅನುವಾಗುವಂತೆ ಅಧಿವೇಶನ ಕರೆಯಬೇಕು ಎಂದು ಕಾಂಗ್ರೆಸ್ ಪಟ್ಟುಹಿಡಿದಿದೆ.ಈ ವಿಷಯ ಕುರಿತು ಸ್ಪೀಕರ್ ಅವರು ಪೈಲೆಟ್ ಮತ್ತು ೧೮ ಶಾಸಕರಿಗೆ ನೀಡಿದ್ದ ಅನರ್ಹತೆ ನೋಟಿಸ್ ಸಂಬ0ಧ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ವಿಜಯಪುರದಲ್ಲಿ ದುಷ್ಕರ್ಮಿಗಳಿಂದ ರೌಡಿಶೀಡರ್‌ನ ಹತ್ಯೆ

Sat Jul 25 , 2020
ಹಳೆ ವೈಷಮ್ಯದ ಹಿನ್ನಲೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್‌ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ ಕೊಲೆಯಾದ ರೌಡಿಶೀಟರ್. ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹಾಗೂ […]

Advertisement

Wordpress Social Share Plugin powered by Ultimatelysocial