ನವದೆಹಲಿ: ದೆಹಲಿಯ ಮಾಜಿ ಸಚಿವ ಮತ್ತು ಎಎಪಿ ಸಂಚಾಲಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಫೆಬ್ರುವರಿ 26ರಂದು ಬಂಧಿಸಿತ್ತು.
ಇದೇ ಪ್ರಕರಣದ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಅಬಕಾರಿ ನೀತಿ ಜಾರಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ‘ಪ್ರಮುಖ ಸಂಚುಕೋರ’ ಎಂದು ಇ.ಡಿ ಆರೋಪಿಸಿದೆ.
ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸಚಿವ ಸಂಪುಟಕ್ಕೆ ಸಿಸೋಡಿಯಾ ರಾಜೀನಾಮೆ ನೀಡಿದ್ದರು