ಅಶ್ವಥ್ ನಾರಾಯಣ್ ವಿರುದ್ಧ ಹಳ್ಳಿಹಕ್ಕಿ ಗರಂ

ಹೆಚ್. ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ವಿಧಾನಪರಿಷತ್ ಟಿಕೆಟ್ ನೀಡುವ ಭರವಸೆ ನೀಡಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ನೀಡಿದ ಹೇಳಿಕೆಗೆ ಮಾಜಿ ಸಚಿವ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಅಶ್ವಥ್ ನಾರಾಯಣ್ ಉಪ ಮುಖ್ಯಮಂತ್ರಿ ಆಗಿದ್ದು ಯಾರಿಂದ ಎಂದು ಪ್ರಶ್ನಿಸಿದ್ದಾರೆ. ನಮ್ಮ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ನಡುವೆ ಏನು ಮಾತುಕತೆ ನಡೆದಿದೆ ಎನ್ನುವುದು ಅಶ್ವಥ್ ನಾರಾಯಣ ಅವರಿಗೆ ಏನು ಗೊತ್ತು ಎಂದು ಪ್ರಶ್ನಿಸಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ನಾನು ಗೆದ್ದು ಶಾಸಕನಾಗಿದ್ದೆ. ಹಾಗಾಗಿ ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸಿದ್ದೆ. ಸೋಲು ಕಂಡಿದ್ದೇನೆ. ದೇವೇಗೌಡರು, ಇಂದಿರಾಗಾAಧಿ, ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಚುನಾವಣೆಯಲ್ಲಿ ಪರಾಭವಗೊಂಡಿರಲಿಲ್ಲವೇ? ಬಿಜೆಪಿಯಲ್ಲಿ ಸೋತವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮೋಸ ಮಾಡಿದ ಪ್ರಿಯಕರನ ಮನೆಯ ಮುಂದೆ ಧರಣಿ

Sun Jun 14 , 2020
ಮೋಸ ಮಾಡಿದ ಪ್ರಿಯಕರನ ಮನೆಯ ಮುಂದೆ ಧರಣಿ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ನಡೆದಿದೆ.  ನಾವಿಬ್ಬರು ನಾಲ್ಕು ವರ್ಷದಿಂದ ಪ್ರೀತಿ ಮಾಡುತ್ತಿದ್ದೇವೆ. ಈಗ ನನಗೆ ಮೋಸ ಮಾಡುತ್ತಿದ್ದಾನೆ ಆದರೆ ನಾನು ಆತನನ್ನು ಬಿಟ್ಟು ಬೇರೆಯವರನ್ನು ಮದುವೆ ಆಗುವುದಿಲ್ಲ ನನಗೆ ಆತನೇ ಬೇಕು. ನನಗೆ ನ್ಯಾಯ ನೀಡಿ ಎಂದು ಕುಂದಲಗುರ್ಕಿ ಗ್ರಾಮದ ಗೊಲ್ಲ ಜಾತಿಗೆ ಸೇರಿದ ಮುರಳಿ ಎಂಬುವವರ ಮಗ ಸುನೀಲ್ ಎಂಬ ಹುಡುಗನ ಮನೆಯ […]

Advertisement

Wordpress Social Share Plugin powered by Ultimatelysocial