ಕೆಟ್ಟ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಸಿದ್ಧವಾಗುತ್ತಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು,ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಲಾಕ್ಡೌನ್ ಸಡಿಲಿಕೆಯ ನಂತರ ಕೊರೊನಾ ಪ್ರಕರಣಗಳು ಮತ್ತಷ್ಟು ಹೆಚ್ಚಾಗಿವೆ. ಮಾರ್ಚ್, ಏಪ್ರಿಲ್ ತಿಂಗಳಿಗಿAತ ಜೂನ್ ತಿಂಗಳಿನಲ್ಲಿ ಕೊರೊನಾ ಕೇಸ್ಗಳು ಜಾಸ್ತಿಯಾಗಿವೆ. ಆದರೆ, ಜೂನ್ ಹಾಗೂ ಜುಲೈನಲ್ಲಿ ಇದೇ ರೀತಿ ಕೇಸ್ಗಳು ಮುಂದುವರೆಯಲಿದ್ದು, ಆಗಸ್ಟ್ ೧೫ ನಂತರ ಕೆಟ್ಟ ಪರಿಸ್ಥಿತಿ ಎದುರಾಗಲಿದೆ. ತಜ್ಞರು ಆಗಸ್ಟ್ ೧೫ ನಂತರ ರಾಜ್ಯದಲ್ಲಿ ಕೊರೊನಾ ಕೇಸ್ಗಳು ಸಂಖ್ಯೆ ಹೆಚ್ಚಾಗಲಿದೆ ಎಂದು ಉಹಿಸಿದ್ದು, ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಆಗಸ್ಟ್ ೧೫ ನಂತರ ಕೆಟ್ಟ ಪರಿಸ್ಥಿತಿ ಎದುರಾಗಲಿದೆ
Please follow and like us: