`ಆಚಾರ್ಯ’ ಸಿನಿಮಾಗಾಗಿ ನಿರ್ಮಿಸಿದ್ದ 20 ಕೋಟಿ ವೆಚ್ಚದ ಸೆಟ್ ಬೆಂಕಿಗಾಹುತಿ,

ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ನಟನೆಯ `ಆಚಾರ್ಯ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಮಕಾಡೆ ಮಲಗಿತ್ತು. ಸಾಕಷ್ಟು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣವಾದ ಆಚಾರ್ಯ ಸಿನಿಮಾಗಾಗಿ 20 ಕೋಟಿ ವೆಚ್ಚದ ಸೆಟ್‌ನ್ನ ನಿರ್ಮಾಣ ಮಾಡಲಾಗಿತ್ತು. ಆದರೆ ಇದೀಗ ಈ ಸೆಟ್ ಬೆಂಕಿಗಾಹುತಿ ಆಗಿದೆ.

ಕೊರಟಾಲ ಶಿವ ನಿರ್ದೇಶನದ `ಆಚಾರ್ಯ’ ಚಿತ್ರದಲ್ಲಿ ಚಿರಂಜೀವಿ, ರಾಮ್ ಚರಣ್ ಲೀಡ್ ರೋಲ್‌ನಲ್ಲಿ ನಟಿಸಿದ್ದರು. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದರು. ಚಿರಂಜೀವಿ ಅವರ ಖಾಸಗಿ ಜಾಗದಲ್ಲಿ 20 ಕೋಟಿ ರೂಪಾಯಿ ವೆಚ್ಚದ ದೇವಸ್ಥಾನದ ಪಟ್ಟಣದ ಅದ್ದೂರಿ ಸೆಟ್ ಕೂಡ ನಿರ್ಮಾಣ ಮಾಡಲಾಗಿತ್ತು. 20 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿದ್ದು, ಇದೀಗ ಈ ಸೆಟ್‌ಗೆ ಬೆಂಕಿ ಬಿದ್ದಿದೆ.

ಮುಂದೆ ತಮ್ಮ ಸಿನಿಮಾ ನಂತರ ಬೇರೆ ಚಿತ್ರದ ಶೂಟಿಂಗ್‌ಗೂ ಕೊಡಬಹುದು ಎಂಬ ಕಾರಣಕ್ಕೆ ಈ ಸೆಟ್‌ನ್ನ ಹಾಗೆಯೇ ಇರಿಸಲಾಗಿತ್ತು. ಕೆಲವರು ಈ ಜಾಗದಲ್ಲಿ ಸಿಗರೇಟ್ ಸೇದಿದ್ದು, ಅವರು ಎದ್ದು ಹೋದ ಮೇಲೆ ಸೆಟ್‌ಗೆ ಬೆಂಕಿ ತಗುಲಿದೆ ಎನ್ನಲಾಗುತ್ತಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಿದ್ದರು ಕೂಡ ಅವರು ಬರುವ ವೇಳೆಗೆ ಇಡೀ ಸೆಟ್ ಬೆಂಕಿಗಾಹುತಿ ಆಗಿದೆ. ಇನ್ನೂ ಈ ಬೆಂಕಿ ದುರಂತದ ವೇಳೆ ಯಾರು ಸ್ಥಳದಲ್ಲಿ ಇಲ್ಲದ ಕಾರಣ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ

:https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಬಾಡೂಟ, ಎಂಇಎಸ್‌ ಅಸ್ತ್ರ ಪ್ರಯೋಗಿಸಿದ ರಮೇಶ್‌ ಜಾರಕಿಹೊಳಿ!

Wed Mar 1 , 2023
ಬೆಳಗಾವಿ:ಒಂದು ಕಾಲದಲ್ಲಿ ಆಪ್ತರಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ‌ಇಂದು ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಲಕ್ಷ್ಮಿ ಗೆಲುವಿಗೆ ಶ್ರಮಿಸಿದ್ದ ರಮೇಶ್ ‌ಈಗ ಅದೇ ಲಕ್ಷ್ಮಿಯನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಲು ಶಪಥ ‌ಮಾಡಿದ್ದಾರೆ. ಕಳೆದ ಎರಡು ತಿಂಗಳಿಂದ ಲಕ್ಷ್ಮಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಆಯಕ್ಟಿವ್ ಆಗಿರುವ ರಮೇಶ್ ‌ಮಂಗಳವಾರ (ಫೆ. ೨೮) ಮತ್ತೊಂದು ಸಮಾವೇಶವನ್ನು ನಡೆಸಿದ್ದು, 5 […]

Advertisement

Wordpress Social Share Plugin powered by Ultimatelysocial