ರಾಜ್ಯ ರಾಜಕಾರಣದಲ್ಲಿ ಕೊರೊನಾ ಸಂದರ್ಭ ಸಾಕಷ್ಟು ರಾಜಕೀಯ ಪ್ರಹಸನ ನಡೆಯುತ್ತಲೆ ಇದೆ. ರಾಜ್ಯ ಸರ್ಕಾರದ ವಿರುದ್ಧ ಸದಾ ಒಂದಲ್ಲಾ ಒಂದು ವಿಷಯಕ್ಕೆ ಕಾಂಗ್ರೆಸ್ ಪಕ್ಷ ಆರೋಪ ಮಾಡುತ್ತಲೆ ಇದೆ. ಕೊರೊನಾ ಸಂದರ್ಭ ರಾಜ್ಯ ಸರ್ಕಾರ ಹಲವಾರು ಭ್ರಷ್ಟಾಚಾರ ನಡೆಸಿದೆ ಎಂದೆಲ್ಲಾ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ನಲ್ಲಿ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ ಎಂದು ಹೇಳಿದ್ದರು. ಕೊರೊನಾ ಚಿಕಿತ್ಸೆ ವೆಚ್ಚದ ವಿಚಾರದಲ್ಲಿ ಭ್ರಷ್ಟಚಾರವಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ನಾಯಕರ ಆರೋಪವನ್ನು ಕರ್ನಾಟಕದ ಜನ ನಂಬಲ್ಲ,ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಎಂದು ಗೊತ್ತಿದೆ. ಯಾರು ಬೇಕಾದರೂ ಲೆಕ್ಕ ಕೇಳಿದರೆ ನಮ್ಮ ಬಳಿ ಸರಿಯಾದ ದಾಖಲೆಗಳಿವೆ ಎಂದಿದ್ದಾರೆ.
ಆಧಾರ ರಹಿತ ಆರೋಪ ರಾಜ್ಯದ ಜನ ನಂಬಲ್ಲ
Please follow and like us: