ಬೆಂಗಳೂರು : ಕಾಂಗ್ರೆಸ್ ಪಕ್ಷವೇ ಮನೆಯೊಂದು ಮೂರು ಬಾಗಿಲಾಗಿದೆ. 10-15 ಮಂದಿ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಖಾಲಿಯಾಗುವ ಪರಿಸ್ಥಿತಿ ಕಾಣಿಸುತ್ತಿದೆ.
ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇಟ್ಟುಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಮನೆ ಖಾಲಿಯಾಗುತ್ತಿದೆ. ಶೀಘ್ರವೇ 10-15 ಜನರು ಕಾಂಗ್ರೆಸ್ ತೊರೆಯಲಿದ್ದಾರೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಪರ್ಕದಲ್ಲಿ 20 ಜನ ಇದ್ದಾರೆ ಎಂದು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಒಂದು ಹೆಜ್ಜೆ ಮುಂದೆ ಹೋಗಿ ನನ್ನ ಸಂಪರ್ಕದಲ್ಲಿ ಮಂತ್ರಿಗಳಿದ್ದಾರೆ ಎಂದು ಹೇಳಿದ್ದರು. ಆದರೆ ಅವರ ಮನೆ ದಿಡ್ಡಿ ಬಾಗಿಲೆ ಕಿತ್ತುಕೊಂಡು ಹೋಗಿದೆ. ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ತರುವ ಕೆಲಸ ಮಾಡಿದ್ದ ಸಿ.ಎಂ. ಇಬ್ರಾಹಿಂ ಅವರೇ ಕಾಂಗ್ರೆಸ್ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada