ಆರ್‌ ಅಶೋಕ್‌ ಹೇಳಿಕೆ ಶೀಘ್ರವೇ 10-15 ಜನ ಕಾಂಗ್ರೆಸ್‌ ಬಿಟ್ಟು ಹೊಗುತ್ತಾರೆ

 

ಬೆಂಗಳೂರು : ಕಾಂಗ್ರೆಸ್ ಪಕ್ಷವೇ ಮನೆಯೊಂದು ಮೂರು ಬಾಗಿಲಾಗಿದೆ. 10-15 ಮಂದಿ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಖಾಲಿಯಾಗುವ ಪರಿಸ್ಥಿತಿ ಕಾಣಿಸುತ್ತಿದೆ.

ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇಟ್ಟುಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಮನೆ ಖಾಲಿಯಾಗುತ್ತಿದೆ. ಶೀಘ್ರವೇ 10-15 ಜನರು ಕಾಂಗ್ರೆಸ್ ತೊರೆಯಲಿದ್ದಾರೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಪರ್ಕದಲ್ಲಿ 20 ಜನ ಇದ್ದಾರೆ ಎಂದು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಒಂದು ಹೆಜ್ಜೆ ಮುಂದೆ ಹೋಗಿ ನನ್ನ ಸಂಪರ್ಕದಲ್ಲಿ ಮಂತ್ರಿಗಳಿದ್ದಾರೆ ಎಂದು ಹೇಳಿದ್ದರು. ಆದರೆ ಅವರ ಮನೆ ದಿಡ್ಡಿ ಬಾಗಿಲೆ ಕಿತ್ತುಕೊಂಡು ಹೋಗಿದೆ. ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ತರುವ ಕೆಲಸ ಮಾಡಿದ್ದ ಸಿ.ಎಂ. ಇಬ್ರಾಹಿಂ ಅವರೇ ಕಾಂಗ್ರೆಸ್ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ಪ್ರತಿ ಗ್ರಾಮದಲ್ಲೂ ʼಗೋಶಾಲೆ ʼ ಆರಂಭಿಸಿ

Sat Jan 29 , 2022
  ಬೆಂಗಳೂರು : ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಗೋಶಾಲೆ (Goshala) ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (High Court) ಮೌಖಿಕವಾಗಿ ಸೂಚನೆ ನೀಡಿದೆ.ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ.ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲದೇ ಪ್ರತಿ ಗ್ರಾಮಮಟ್ಟದಲ್ಲಿಯೂ ಗೋ ಶಾಲೆ ತೆರೆಯಬೇಕು ಎಂದು ಸೂಚನೆ ನೀಡಿದೆ.ಇನ್ನು ಮುಂದಿನ ವಿಚಾರಣೆ ವೇಳೆ ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು […]

Advertisement

Wordpress Social Share Plugin powered by Ultimatelysocial