ಹೆಮ್ಮಾರಿ ಕೊರೊನಾ ಮೆಟ್ಟಿನಿಂತೂ, ಸಂದಿಗ್ಧ ಪರಿಸ್ಥಿತಿಯಲ್ಲಿ ಜಾಗೃತಿ ಮೂಡಿಸಿದ ವಾರಿಯರ್ಸ್ಯಾದ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಯ ಈಡೇರಿಸುವಂತೆ ಕನಾರ್ಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಹಾಗೂ ಬೆಳಗಾವಿ ಜಿಲ್ಲಾ ಸಮಿತಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಕೊರೊನಾ ಸಂದರ್ಭದಲ್ಲಿ ಹಗಲಿರುಳು ಶ್ರಮಿಸಿದ ಆಶಾ ಕಾರ್ಯಕರ್ತೆಯರ ಆರ್ಥಿಕ ಸಂಕಷ್ಟಕ್ಕಿಡಾಗಿದ್ದು ಸೇವೆಗೆ ನೈಜ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸರಕಾರ ಮಾಸಿಕ ೧೨ ಸಾವಿರ ವೇತನ ನೀಡಿ, ವಿಶೇಷ ಪ್ಯಾಕೇಜ್ ಘೋಷಿಸಬೇಕು. ಈಗಿರುವ ವೇತನದಲ್ಲಿ ಜೀವನ ಸಾಗಿಸುವುದು ದುಸ್ತರವಾಗಿದೆ ಅದಕ್ಕಾಗಿ, ಕೊರೊನಾ ಸೋಂಕು ನಿಯಂತ್ರಣಕ್ಕೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರ ಆರೋಗ್ಯವನ್ನು ರಕ್ಷಿಸಲು ಅಗತ್ಯವಿರುವ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕೆಂದರು. ಈ ಸಂದರ್ಭದಲ್ಲಿ ಸುಜಾತಾ ಕಾಡಮಠ, ಜಯಶ್ರೀ ನಾವಿ, ಗೀತಾ ರಾಯಗೋಳ, ಲತಾ ಜಾಧವ , ರೂಪಾ ಅಂಗಡಿ, ಭಾರತಿ ಮಶಾಳ ಹಾಗೂ ಇತರರು ಇದ್ದರು.
ಆಶಾಕರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಮನವಿ
Please follow and like us: