ಆಶಾ ಕಾರ್ಯಕರ್ತೆಯರ ಪ್ರತಿಭಟನೆ- ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಹತ್ತು ವರ್ಷಗಳಿಂದ ಆಶಾ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೂ ಸರ್ಕಾರ ಮಾತ್ರ ನಮ್ಮ ನೆರವಿಗೆ ಧಾವಿಸುತ್ತಿಲ್ಲ. ಸಿಗುವ ವೇತನದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12,000 ರೂಪಾಯಿ ಗೌರವಧನ

ಖಾತರಿಪಡಿಸಬೇಕು. ಕೊರೊನಾ ಸೋಂಕಿಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆಗೆ ಸರ್ಕಾರವೇ ಪರಿಹಾರ ನೀಡಬೇಕು . ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ದೊಡ್ಡ ಪ್ರಮಾಣದಲ್ಲಿ ಏರುತ್ತಿರುವ ರಿಲಯನ್ಸ್ ಷೇರಿನ ಬೆಲೆ

Fri Jul 24 , 2020
ರಿಲಯನ್ಸ್ ಇಂಡಸ್ಟ್ರೀಸ್ ಮಾಲಿಕ ಮುಕೇಶ್ ಅಂಬಾನಿ ಶ್ರೀಮಂತಿಕೆ ದಿನೇದಿನೇ ಏರುತ್ತಿದೆ. ವಿಶ್ವದ ೧೩ ಕಂಪನಿಗಳು ಆ ರಿಲಯನ್ಸ್ನಲ್ಲಿ ಹೂಡಿಕೆ ಮಾಡಿದ್ದರಿಂದ, ರಿಲಯನ್ಸ್ ಷೇರಿನ ಬೆಲೆ ದೊಡ್ಡ ಪ್ರಮಾಣದಲ್ಲಿ ಏರುತ್ತಿದೆ. ಈಗ ಮುಕೇಶ್ ವಿಶ್ವವಿಖ್ಯಾತ ಉದ್ಯಮಿ ವಾರೆನ್ ಬಫೆಟ್‌ರನ್ನು ಹಿಂದಿಕ್ಕಿ ವಿಶ್ವದ ೫ನೇ ಶ್ರೀಮಂತ ಸ್ಥಾನಕ್ಕೇರಿದ್ದಾರೆ. ಪ್ರಸ್ತುತ ಮುಕೇಶ್ ಸಂಪತ್ತಿನ ಮೌಲ್ಯ ೭೫.೧ ಬಿಲಿಯನ್ ಡಾಲರ್. ಅವರು ಈಗ ಫೇಸ್‌ಬುಕ್ ಮಾಲಿಕ ಮಾರ್ಕ್ ಜುಕರ್ ಬರ್ಗ್ ನಂತರದ ಸ್ಥಾನದಲ್ಲಿದ್ದಾರೆ. ಜುಕರ್‌ಬರ್ಗ್ ಸಂಪತ್ತಿನ […]

Advertisement

Wordpress Social Share Plugin powered by Ultimatelysocial