ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ಮಹಿಳೆ ಸಾವು

ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಗಳ ಬೇಜವಾಬ್ದಾರಿತನ ಮತ್ತೆ ಮತ್ತೆ ವರದಿಯಾಗುತ್ತಲೇ ಇದೆ. ಕೋವಿಡ್ ಪರಿಸ್ಥಿತಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕು ಇಲ್ಲದ ರೋಗಿಗಳಿಗೆ ಚಿಕಿತ್ಸೆ ಸಿಗುವುದು ಕಷ್ಟಕರವಾಗಿದೆ. ಅನಾರೋಗ್ಯಕ್ಕೀಡಾಗಿದ್ದ ಮಹಿಳೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಆಕೆ ಸಾವನ್ನಪ್ಪಿದ್ದಾರೆ. ಕುರುಬರಹಳ್ಳಿಯ ಲೋಕೇಶ್ ಎಂಬವರ ತಾಯಿಗೆ ಹೃದಯಾಘಾತ ಸಂಭವಿಸಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಕೆಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದರು. ಬಳಿಕ ಜಯದೇವ ಸೇರಿದಂತೆ ನಾಲ್ಕೈದು ಆಸ್ಪತ್ರೆಗಳಿಗೆ ಕರೆದೊಯ್ದರೂ ಎಲ್ಲಿಯೂ ಮಹಿಳೆಯನ್ನು ದಾಖಲಿಸಿಕೊಂಡಿಲ್ಲ.ನಂತರ  ಕೋವಿಡ್ ಚಿಕಿತ್ಸೆ ಕೊಡುವ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸದ್ದಾರೆ. ಕೊನೆಗೆ ಮಹಿಳೆಯನ್ನು ಕೆಂಪೇಗೌಡ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆಂದು ಮಹಿಳೆಯ ಪುತ್ರ ಆರೋಪಿಸಿದ್ದಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಮಹಿಳೆ ಸಾವನ್ನಪ್ಪಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ಸಿಬ್ಬಂದಿಗಳಿಗೆ ಸಿಹಿ ಸುದ್ದಿ

Sun Jul 5 , 2020
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಆದ್ದರಿಂದ ಸೀಲ್ ಡೌನ್ ಪ್ರದೇಶಗಳಲ್ಲಿ ನೆಲೆಯೂರಿರುವ ವಿಧಾನಸೌಧ ಸೇರಿದಂತೆ ಸರ್ಕಾರಿ ಸಚಿವಾಲಯಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ರಾಜ್ಯ ಸರ್ಕಾರ ಅನುಮಂತಿ ನೀಡಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ, ಹೀಗಾಗಿ ವಿಧಾನಸೌಧ, ವಿಕಾಸಸೌಢ, ಎಂ.ಎಸ್.ಬಿಲ್ಡಿಂಗ್ ಸೇರಿದಂತೆ ಸರ್ಕಾರದ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಸೀಲ್ಡೌನ್ ಪ್ರದೇಶದಲ್ಲಿದ್ದರೆ ಮನೆಯಿಂದಲೇ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದೆ. […]

Advertisement

Wordpress Social Share Plugin powered by Ultimatelysocial