ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಬೆಡ್ಗಳನ್ನು ನೀಡೋದಕ್ಕೆ ನಿರಾಕರಿಸಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂದು ಸಂಜೆ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಭೆ ಕರೆಯಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಮಾತು ಕೊಟ್ಟಂತೆ ಖಾಸಗಿ ಆಸ್ಪತ್ರೆಗಳ ಮಾಲೀಕರು ಬೆಡ್ಗಳನ್ನು ಕೊಟ್ಟಿಲ್ಲ. ಈ ಹಿನ್ನೆಲೆ ಇಂದು ಅವರ ಸಭೆ ಕರೆಯಲಾಗಿದೆ. ಖಾಸಗಿ ಆಸ್ಪತ್ರೆಗಳ ೪,೫೦೦ ಬೆಡ್ಗಳನ್ನು ಕೊರೊನಾ ಚಿಕಿತ್ಸೆಗೆ ನೀಡುವಂತೆ ಕೇಳಲಾಗಿತ್ತು. ಆದರೆ, ೧೦೦೦ ಬೆಡ್ಗಳನ್ನು ಮಾತ್ರ ನೀಡಲಾಗಿದೆ. ಬೆಂಗಳೂರಿನಲ್ಲಿ ವೇಗವಾಗಿ ಕೊರೋನಾ ಸೋಂಕು ಹೆಚ್ಚುತ್ತಿದೆ. ಅದರ ನಿಯಂತ್ರಣಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಆಸ್ಪತ್ರೆ ಮಾಲೀಕರ ಜೊತೆ ಸಚಿವ ಸುಧಾಕರ್ ಸಭೆ
Please follow and like us: