ಆ್ಯಂಬುಲೆನ್ಸ್​ ಸುಟ್ಟವರು ದೇಶದ್ರೋಹಿಗಳು- ಸಚಿವ ಸುರೇಶ ಅಂಗಡಿ ಕಿಡಿ

ಬಿಮ್ಸ್ ಆವರಣದಲ್ಲಿದ್ದ ಆ್ಯಂಬುಲೆನ್ಸ್ ಸುಟ್ಟು, ಜಿಲ್ಲಾಸ್ಪತ್ರೆಗೆ ಕಲ್ಲು ಎಸೆದ ದುಷ್ಕರ್ಮಿಗಳು ದೇಶದ್ರೋಹಿಗಳು ಎಂದು ಸಚಿವ ಸುರೇಶ ಅಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಮ್ಸ್ ಎದುರು ಆ್ಯಂಬುಲೆನ್ಸ್‌ಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿರುವ ಕೃತ್ಯ ಪೂರ್ವನಿಯೋಜಿತ.

ರೋಗಿ ಮೃತಪಟ್ಟ ಅರ್ಧಗಂಟೆಯಲ್ಲಿ ಅಷ್ಟೊಂದು ಜನ ಸೇರಿರುವುದು ಇದೊಂದು ಪೂರ್ವ ನಿಯೋಜಿತ ಕೃತ್ಯ ಎನಿಸುತ್ತದೆ. ಇದರ ಹಿಂದೆ ಯಾವ ಶಕ್ತಿ ಇದೆ ಎಂಬುದನ್ನು ಕಂಡು ಹಿಡಿಯಬೇಕು. ಪೊಲೀಸರ, ಇಂಟೆಲಿಜೆನ್ಸ್ ಈ ಕೆಲಸ ಮಾಡಬೇಕು. ಬಿಮ್ಸ್ ವೈದ್ಯರು, ನರ್ಸ್‌ಗಳು ಹೆದರುವ ಅವಶ್ಯಕತೆ ಇಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತೆ ಎಂದು ಆತ್ಮಸ್ಥೈರ್ಯ ತುಂಬಿದರು.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ವಿರುದ್ದ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರು

Sat Jul 25 , 2020
ಬೀದರ್ ಆರ್ಥಿಕ ಸಂಕಷ್ಟದಲ್ಲೂ ಕೊರೊನಾ ವಿರುದ್ದ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಮಾಸಿಕ ವೇತನ 12,000 ರೂ.  ನೀಡುವಂತೆ ಆಗ್ರಹಿಸಿ ಭಾಲ್ಕಿ ಹಾಗೂ ಔರಾದ್ ತಾಲ್ಲೂಕಿನಲ್ಲಿಂದು ಆಶಾ ಕಾರ್ಯೆಕರ್ತೆಯರು ತಹಶೀಲ್ದಾರ್  ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತೆಯರು ತಮ್ಮ ಜೀವನದ ಹಂಗು ತೊರೆದು ಕೋವಿಡ್ ವಿರುದ್ಧ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ರಾಜ್ಯ ಸರಕಾರದಿಂದ ಮಾಸಿಕ 12,000 ರೂ. ವೇತನ ಜೊತೆಗೆ ಕೋವಿಡ್-19ರ ವಿರುದ್ಧ ಹೋರಾಟಕ್ಕೆ ಅಗತ್ಯವಿರುವ […]

Advertisement

Wordpress Social Share Plugin powered by Ultimatelysocial