ಇಂದು ನಡೆಯುವ ಸಭೆಯಲ್ಲಿ ತಜ್ಞರು ನೀಡುವ ಸಲಹೆ ಮೇಲೆ ಕೋವಿಡ್ ರೂಲ್ಸ್ ಭವಿಷ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿದ್ದರೂ, ಆಸ್ಪತ್ರೆಗೆ ದಾಖಲಾಗುತ್ತಿರುವವ ಸಂಖ್ಯೆ ಕಡಿಮೆ ಇರುವುದರಿಂದ ರಾಜ್ಯದಲ್ಲಿ ಇರುವ ಕೋವಿಡ್ ನಿರ್ಬಂಧ ಸಡಿಲಿಕೆ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಮಧ್ಯಾಹ್ನ 1 ಗಂಟೆಗೆ ಕೋವಿಡ್ ತಜ್ಞರ ಜೊತೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ತಜ್ಞರು ನೀಡುವ ಸಲಹೆ ಮೇಲೆ ಕೋವಿಡ್ ರೂಲ್ಸ್ ಭವಿಷ್ಯ ನಿರ್ಧಾರವಾಗಲಿದೆ. ಎಕ್ಸ್ ಪರ್ಟ್ ಕಮಿಟಿ ನೀಡುವ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಇನ್ನು ರಾಜ್ಯದಲ್ಲಿ ನೈಟ್ ಕರ್ಪ್ಯೂ ಸಮಯ ಬದಲಾವಣೆ, ಕರ್ಪ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿ ಆರಂಭ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

25 ನಿಮಿಷ ಕಾದಾಡಿ ಪ್ರಾಣಬಿಟ್ಟ ನಾಗರಹಾವು ಮತ್ತು ಸಾಕು ನಾಯಿ..!

Sat Jan 29 , 2022
ಹಾಸನ : ಸಾಕು ನಾಯಿ ಹಾಗೂ ನಾಗರಹಾವಿನ ನಡುವೆ ಕಾದಾಟ ನಡೆದ ಬಳಿಕ ಒಂದೇ ಸಮಯದಲ್ಲಿ ಈ ಎರಡೂ ಪ್ರಾಣೆಗಳು ಜೀವ ಕಳೆದುಕೊಂಡ ಮನಕಲಕುವ ಘಟನೆ ಶುಕ್ರವಾರಸಂತೆ ಬಳಿ ಇಂದು ಸಂಭವಿಸಿದೆ .ಜಿಲ್ಲೆಯ ಸಕಲೇಶಪುರ ತಾಲೂಕಿನ ಶುಕ್ರವಾರ ಸಂತೆ ಬಳಿ ಮಂಜುನಾಥ್ ಎಂಬುವವರಿಗೆ ಸೇರಿದ ನಾಯಿ ಹಾಗೂ ಅವರ ಜಮೀನಿನಲ್ಲಿ ಕಂಡಂತಹ ನಾಗರಹಾವಿನ ನಡುವೆ 25 ನಿಮಿಷಕ್ಕೂ ಹೆಚ್ಚು ಕಾಲ ಕಾದಾಟ ನಡೆದಿದೆಈ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. […]

Advertisement

Wordpress Social Share Plugin powered by Ultimatelysocial