ಇಂದು ರೈತ ಮುಖಂಡರ ಜೊತೆ ಸಿಎಂ ಸಭೆ

ಲಾಕ್​​ಡೌನ್ ಸಂಕಷ್ಟಕ್ಕೆ ಸಿಲುಕಿದವರ ನೆರವಿಗಾಗಿ‌‌ ಘೋಷಿಸಿದ ವಿಶೇಷ ಪ್ಯಾಕೇಜ್‌ನಲ್ಲಿ ರೈತ ಸಮುದಾಯಕ್ಕೆ ನಿರೀಕ್ಷಿತ ಆದ್ಯತೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತವಾದ ಹಿನ್ನೆಲೆ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ. ಲಾಕ್‌ಡೌನ್ ನಂತರ ಕೃಷಿಕ್ಷೇತ್ರದ ಸಮಸ್ಯೆಗಳು, ಕೈಗೊಳ್ಳಬೇಕಾದ ಪರಿಹಾರಗಳ ಕುರಿತು ಚರ್ಚಿಸಲು ಇಂದು ಸಂಜೆ 4.30 ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ರೈತ ಪ್ರತಿನಿಧಿಗಳ ಸಭೆಯನ್ನು ಕರೆದಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿದಂತೆ ರೈತ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದು, ರೈತರ ಸಮಸ್ಯೆ, ಸಂಕಷ್ಟ, ಸವಾಲುಗಳ ಕುರಿತು ಚರ್ಚಿಸಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನಾಳೆ ಸಿಎಂ ಬಿಎಸ್ ವೈ ಭೇಟಿ ಮಾಡಲಿರುವ ಸಿದ್ದರಾಮಯ್ಯ ..!

Thu May 7 , 2020
ಮಾರಣಾಂತಿಕ ಕೊರೋನಾ ವೈರಸ್‌ ವಿರುದ್ಧ ಹೋರಾಡುವ ಸಲುವಾಗಿ ಚರ್ಚಿಸಲು ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನಾಳೆ ಗೃಹ ಕಚೇರಿ ಕೃಷ್ಣಾದಲ್ಲಿ ಒಂದಾಗಲಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸಂಬಂಧಿಸಿದಂತೆ ಚರ್ಚಿಸಲು ಸಿಎಂ ಬಿಎಸ್‌ವೈ ಭೇಟಿಗೆ ಸಿದ್ದರಾಮಯ್ಯ ಅವರು ಅವಕಾಶ ಕೇಳಿ ಪತ್ರ ಬರೆದಿದ್ದರು. ಈ ಹಿನ್ನೆಲೆ ಇಂದು ಸಿಎಂ ಕಛೇರಿಯಿಂದ ಭೇಟಿಗೆ ಅನುಮತಿ ದೊರೆತಿದ್ದು, ನಾಳೆ ಬೆಳಗ್ಗೆ 11-30 ಕ್ಕೆ ಸಿಎಂ ಗೃಹ […]

Advertisement

Wordpress Social Share Plugin powered by Ultimatelysocial