ಈಶ್ವರಪ್ಪಗೆ ಶಕ್ತಿ ಇದ್ದರೆ ಮಾಹಿತಿ ಇದ್ದರೆ ನಾನು ಎಲ್ಲಿ ಮಲಗಿದ್ದೇನೆ ಎಂಬುದನ್ನು ಹೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೊರೊನಾ ಹಿನ್ನೆಲೆ ನರ್ಸ್ಗಳಿಗೆ ,ಆಶಾ ಕಾರ್ಯಕರ್ತೆಯರಿಗೆ, ಪೌರಕಾರ್ಮಿಕರಿಗೆ ಪಿಪಿಇ ಕಿಟ್ಗಳನ್ನು ಕಾಂಗ್ರೆಸ್ ಭವನದಲ್ಲಿ ವಿತರಿಸಿದ ನಂತರ ಮಾನತಾಡಿದ ಅವರು, ದೇಶದ ಮಹತ್ವಾಕಾಂಕ್ಷೆಯ ನರೇಗಾ ಯೋಜನೆಯ ಶಕ್ತಿ ಎನೆಂಬುದು ಈಶ್ವರಪ್ಪನವರಿಗೆ ಗೊತ್ತಿಲ್ಲ. ಸಂಕಷ್ಟದ ಸಂದರ್ಭದಲ್ಲಿ ಒಂದು ಕುಟುಂಬಕ್ಕೆ ನರೇಗಾ ಯೋಜನೆಯನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಅರಿವಿಲ್ಲ. ಈ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದ ಎಂದು ಡಿ.ಕೆ.ಶಿ ಓಪನ್ ಚಾಲೆಂಜ್ ಹಾಕಿದ್ದಾರೆ. . ಅವರೇ ನರೇಗಾ ವಿಚಾರದಲ್ಲಿ ಬೇಕಾದಷ್ಟು ತನಿಖೆಗೆ ಆದೇಶ ಮಾಡಿದ್ದಾರೆ. ಕನಕಪುರದಲ್ಲಿ ನರೇಗಾ ಯೋಜನೆಯ ಯಶಸ್ವಿ ಬಗ್ಗೆ ಕೇಂದ್ರ ಸರ್ಕಾರ ಬಹುಮಾನ ನೀಡಿದೆ. ಇದರ ಬಗ್ಗೆ ಈಶ್ವರಪ್ಪನವರಿಗೆ ಗೊತ್ತಿಲ್ಲ. ಇದು ದೇಶದ ವಿಚಾರ, ಮಾನವೀಯತೆ ವಿಚಾರ. ಇದರಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ಪ್ರತಿಪಕ್ಷದ ಅಧ್ಯಕ್ಷನಾಗಿ ಮಾತನಾಡುತ್ತಿದ್ದೇನೆ. ಈಶ್ವರಪ್ಪ ಯಾವ ಮಾಹಿತಿಯೊಂದಿಗಾದರೂ ಬರಲಿ ಈ ಯೋಜನೆಯನ್ನು ಯಾವ ರೀತಿ ಬಳಸಿಕೊಳ್ಳಬೇಕು, ಜನರಿಗೆ ಯಾವ ರೀತಿ ಮುಟ್ಟಿಸಬೇಕು ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದನಿದ್ದೇನೆ. ಓಡಿಹೋಗುವ ಜಾಯಮಾನ ನನ್ನದಲ್ಲ ಎಂದು ಹೇಳಿದರು.