ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯ ಹನುಮಂತರಾಯ ಅವರ ಮಗ ಸಿದ್ದರಾಮಯ್ಯ ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಶೇಕಡಾ 92.66% ರಷ್ಟು ಅಂಕಗಳನ್ನು ತೆಗೆದುಕೊಳ್ಳುವ ಮೂಲಕ ಕಲಾ ವಿಭಾಗದಲ್ಲಿ ಜಿಲ್ಲೆಗೆ 3ನೇ ಸ್ಥಾನ ಪಡೆದು ದೇವದುರ್ಗ ತಾಲ್ಲೂಕಿಗೆ 2ನೇ ಸ್ನಾನ ಗಳಿಸಿ ಸಾಧನೆ ಮಾಡಿದ್ದಾರೆ. ಉತ್ತಮ ಸಾಧನೆಗೈದ ವಿದ್ಯಾರ್ಥಿಯನ್ನು ಗಂಡುಗಲಿ ಕುಮಾರರಾಮ ಜನ ಕಲ್ಯಾಣ ಸಮಿತಿಯ ಮುಖಂಡರಿಂದ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಸಂಘದ ಮುಖಂಡರು, ಸಿದ್ದರಾಮಯ್ಯನ ಸಾಧನೆ ನಮ್ಮೂರಿಗೆ ಮಾತ್ರವಲ್ಲ ತಾಲ್ಲೂಕು ಮತ್ತು ಜಿಲ್ಲೆಗೆ ಮಾದರಿಯಾಗಿದೆ. ಈ ವಿದ್ಯಾರ್ಥಿಯ ಸಾಧನೆ ಇತರರಿಗೂ ಮಾದರಿಯಾಗಲಿ ಎಂಬ ನಿಟ್ಟಿನಲ್ಲಿ ಸನ್ಮಾನ ಕಾರ್ಯಕ್ರಮ ಮಾಡಿದ್ದೇವೆ. ಸಿದ್ದರಾಮಯ್ಯ ನಮ್ಮೂರಿನ ಕೀರ್ತಿ ಹೆಚ್ಚಿಸಲಿ, ಈತನ ಸಾಧನೆ ಊರಿನ ಜನರು ಹೆಮ್ಮೆ ಪಡುವಂತೆ ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ವಿದ್ಯಾರ್ಥಿಯ ಸಾಧನೆ ಇತರರಿಗೂ ಮಾದರಿಯಾಗಲಿ
Please follow and like us: