ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮತಬೇಟೆ ಶುರು ಮಾಡಿವೆ. ಇದರ ಮಧ್ಯೆ ರಾಜಕೀಯ ನಾಯಕರ ಆರೋಪ ಹಾಗೂ ಪ್ರತ್ಯಾರೋಪಗಳು ಜೋರಾಗಿದೆ.
ದೇಶದ ಅಭಿವೃದ್ಧಿ ಬಿಜೆಪಿ ಸರ್ಕಾರದ ಕೈಯಲ್ಲಿದೆ ಎಂಬ ಸಂದೇಶ ಸಾರಿದ್ದಾರೆ. ಮತ್ತೊಂದೆಡೆ ಇತರೆ ಪಕ್ಷಗಳು ಕೂಡ ನಾನಾ ಪ್ರಯತ್ನಕ್ಕೆ ಕೈ ಹಾಕುತ್ತಿವೆ. ಇಂದು ಚಿಕ್ಕಮಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಹಾಗೂ ಗದಗ ಜಿಲ್ಲೆ ರೋಣ, ನರಗುಂದ ಕ್ಷೇತ್ರದಲ್ಲಿ ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada