ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬೊಮ್ಮಾಯಿ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​​ ಮತಬೇಟೆ ಶುರು ಮಾಡಿವೆ. ಇದರ ಮಧ್ಯೆ ರಾಜಕೀಯ ನಾಯಕರ ಆರೋಪ ಹಾಗೂ ಪ್ರತ್ಯಾರೋಪಗಳು ಜೋರಾಗಿದೆ.

ರಾಜ್ಯ ಚುನಾವಣೆಯ ಕ್ಷಣ ಕ್ಷಣದ ಅಪ್ಡೇಟ್​​ ಒಂದೇ ಕ್ಲಿಕ್​ನಲ್ಲಿ.ಕರ್ನಾಟಕ ವಿಧಾನ ಸಭಾ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿದಂತೆ ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಹೆಚ್ಚುಮಾಡುತ್ತಿವೆ. ನಾನಾ ಸರ್ಕಸ್​ಗಳನ್ನು ಮಾಡುತ್ತಿವೆ. ಸದ್ಯ ನಿನ್ನೆ(ಫೆ.27) ಪ್ರಧಾನಿ ನರೇಂದ್ರ ಮೋದಿ(Narendra Modi Karnataka Visit) ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಿ ಅನೇಕ ಕಾಮಗಾರಿ, ಯೋಜನೆಗಳನ್ನು ಉದ್ಘಾಟಿಸಿ ಜನರಲ್ಲಿ ವಿಶ್ವಾಸದ ಬೀಜ ಬಿತ್ತಿದ್ದಾರೆ.
ದೇಶದ ಅಭಿವೃದ್ಧಿ ಬಿಜೆಪಿ ಸರ್ಕಾರದ ಕೈಯಲ್ಲಿದೆ ಎಂಬ ಸಂದೇಶ ಸಾರಿದ್ದಾರೆ. ಮತ್ತೊಂದೆಡೆ ಇತರೆ ಪಕ್ಷಗಳು ಕೂಡ ನಾನಾ ಪ್ರಯತ್ನಕ್ಕೆ ಕೈ ಹಾಕುತ್ತಿವೆ. ಇಂದು ಚಿಕ್ಕಮಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಹಾಗೂ ಗದಗ ಜಿಲ್ಲೆ ರೋಣ, ನರಗುಂದ ಕ್ಷೇತ್ರದಲ್ಲಿ ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಡುಹಗಲೇ ಕಳ್ಳನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆ.

Tue Feb 28 , 2023
ಚಾಲಾಕಿ ಕಳ್ಳನೋರ್ವ ಹಾಡುಹಗಲೇ ಆಟೋದಲ್ಲಿದ್ದ ನಗದು ಹಾಗೂ ಪೆನ್ ಡ್ರೈವ್ ಕದ್ದು ಪರಾರಿಯಾಗಿರುವ ಘಟನೆ ನಗರದ ಗಬ್ಬೂರ ರಸ್ತೆಯಲ್ಲಿರುವ ಅಂಜುಮನ್ ಶಾದಿ ಹಾಲ ಹತ್ತಿರ‌ ನಡೆದಿದ್ದು, ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಮಹಮ್ಮದ್ ಗೌಸ್ ಗೌಳಿ ಎಂಬಾತನಿಗೆ ಸೇರಿದ ಆಟೋ ಇದಾಗಿದ್ದು, ಆಟೋ ಚಾಲಕ ಟೀ ಕುಡಿಯಲಿಕ್ಕೆ ತೆರಳಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ 6,300 ರೂ. ನಗದು ಹಾಗೂ ಒಂದು ಪೆನ್ ಡ್ರೈವ್ ಕಳ್ಳತನ ಮಾಡಿದ್ದು, ಸ್ಥಳದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಕಳ್ಳನ ಕೈಚಳಕ […]

Advertisement

Wordpress Social Share Plugin powered by Ultimatelysocial