ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ 882 ಬ್ಯಾಕ್ ಲಾಗ್ ಹುದ್ದೆಗಳನ್ನು ( Backlog Recruitment ) ಶೀಘ್ರವೇ ಭರ್ತಿ ಮಾಡಿಕೊಳ್ಳೋದಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ( Minister Govinda Karajola ) ತಿಳಿಸಿದ್ದಾರೆ.ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು.ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ.ಶ್ರೀರಾಮುಲು ಸಭೆಯಲ್ಲಿ ಹಾಜರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada