ಉಮಾಭಾರತಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ್ದ ಮಧ್ಯ ಪ್ರದೇಶ ಮಾಜಿ ಸಿಎಂ ಉಮಾಭಾರತಿ ಅವರು ಇದೀಗ ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ ಉಳಿಯುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು.. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಉಮಾ ಭಾರತಿ ಅವರಿಗೆ ಆಹ್ವಾನವಿದೆ. ಆದರೂ ತಾವು ಕಾರ್ಯಕ್ರಮದಿಂದ ದೂರು ಉಳಿಯಲು ನಿರ್ಧರಿಸಿದ್ದಾರೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿದ್ಯುಕ್ತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಂತಹ ಪ್ರಮುಖ ಕಾರ್ಯಕ್ರಮದಿಂದಲೇ ಉಮಾಭಾರತಿ ದೂರ ಉಳಿಯಲು ನಿರ್ಧರಿಸಿದ್ದಾರೆ. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಗೈರಾಗುವ ಉಮಾಭಾರತಿ ಅವರ ನಿರ್ಧಾರಕ್ಕೆ ಕೊರೋನಾ ವೈರಸ್ ಕಾರಣ ಎನ್ನಲಾಗಿದೆ

Please follow and like us:

Leave a Reply

Your email address will not be published. Required fields are marked *

Next Post

ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿ

Mon Aug 3 , 2020
ಕಳೆದೊಂದು ವಾರದ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ನರಸೀಪುರ ಗ್ರಾ.ಪಂ.ಸದಸ್ಯೆ ಅಂಜಿನಮ್ಮನ ಪತಿ ಸದಾನಂದ. ಮೃತ ವ್ಯಕ್ತಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಕೊರೊನಾ ಹಿನ್ನಲೆ ಮೃತದೇಹ ಪರೀಕ್ಷೆಗೆ ಒಳ‌ಪಡಿಸಿದರೆ ವಾರಗಟ್ಟಲೆ ಮೃತ ದೇಹ ಕೊಡುವುದಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡದೆ ರಾತ್ರೋರಾತ್ರಿ ದಫನ್ ಮಾಡಿರುವುದೇ ಮೃತನ ಕುಟುಂಬಸ್ಥರ ಮೇಲೆ ಸಂಶಯಕ್ಕೆ ಕಾರಣವಾಗಿದೆ. ದಫನ್ ಮಾಡಿದ ಮರುದಿನ ಬೆಳ್ಳಿಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. […]

Advertisement

Wordpress Social Share Plugin powered by Ultimatelysocial