ಉಳ್ಳವರು BPL ಕಾರ್ಡ್ ಹಿಂದಿರುಗಿಸಿ

ಉಳ್ಳವರು ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಬೇಕು ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಆರಂಭದ ಮುನ್ನ 63 ಸಾವಿರ ಅಕ್ರಮ ಪಡಿತರ ಚೀಟಿ ರದ್ದುಗೊಳಿಸಿದಲ್ಲದೆ, 93 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೊರೋನಾ ಸಾಂಕ್ರಾಮಿಕ ಸೋಂಕಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಕಳೆದ 3 ತಿಂಗಳಿನಲ್ಲಿ ಯಾವುದೆ ಕಾರ್ಡ್ ರದ್ದತಿಗೆ ಕ್ರಮ ಕೈಗೊಂಡಿಲ್ಲ. ಉಳ್ಳವರು ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿದಲ್ಲಿ ಸ್ವಯಂಪ್ರೇರಿತರಾಗಿ ಮುಂದೆ ಬಂದು ಕಾರ್ಡ್ ಮರಳಿಸಬೇಕು ಎಂದು ಮನವಿ ಮಾಡಿದರು. ಬಡವರಿಗೆ ದಕ್ಕಬೇಕಾದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಅಕ್ರಮ ಪಡಿತರ ಸಾಗಾಣಿಕೆ ಮತ್ತು ಸೋರಿಕೆ ತಡೆಯುವ ನಿಟ್ಟಿನಲ್ಲಿ ಪ್ರತಿ ತಿಂಗಳು ಐದು ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದೇನೆ. ಯಾವುದೇ ಗೋಡೌನ್‍ನಲ್ಲಿ ಅಕ್ರಮ ಪಡಿತರ ದಾಸ್ತಾನು ಕಂಡುಬಂದು ಪ್ರದೇಶದ ಡಿಪೋ ದಾಸ್ತಾನಿನಲ್ಲಿ ಸಂಗ್ರಹಣೆ ಕಡಿಮೆಯಿದ್ದಲ್ಲಿ ಅಂತಹ ಡಿಪೋ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ

Fri Jun 12 , 2020
ಕೊರೊನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಇರುವುದರಿಂದ ಸಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಪಂಚಾಯಿತಿಗಳ ಅವಧಿ ಪೂರ್ಣಗೊಂಡಿರುವುದರಿಂದ ಆಡಳಿತಾಧಿಕಾರಿ ನೇಮಿಸಲು ಸರಕಾರ ನಿರ್ಧರಿಸಿದೆ. ಜತೆಗೆ ಮುಂದಿನ 2ರಿಂದ 3 ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 6 ತಿಂಗಳ ಒಳಗೆ ಚುನಾವಣೆ […]

Advertisement

Wordpress Social Share Plugin powered by Ultimatelysocial