ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ

ಪುಲ್ವಾಮ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಒಬ್ಬ ಉಗ್ರ ಹತ್ಯೆಯಾಗಿದ್ದು, ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ದಿನೇ ದಿನೇ ಹೆಚ್ಚಾಗುತ್ತಿದೆ. ಕಣಿವೆ ರಾಜ್ಯದಲ್ಲಿ ಹೆಚ್ಚುತ್ತಿರುವ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳನ್ನು ನೆಲಸಮ ಮಾಡಲು ಭಾರತೀಯ ಯೋಧರು ಕಾರ್ಯಚರಣೆ ನಡೆಸುತ್ತಿದ್ದಾರೆ.ಪುಲ್ವಾಮ ಜಿಲ್ಲೆಯ ಗುಸ್ಸೂ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು, ಪೊಲೀಸ್ ಸಿಬ್ಬಂದಿ ಶೋಧ ಕಾರ್ಯಚರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಯೋಧರ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತಿದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಎನ್ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ. ಈ ಕಾಳಗದಲ್ಲಿ ಪೊಲೀಸರು,ಯೋಧರು ಗಾಯಗೊಂಡಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಕೆಲವು ಉಗ್ರರೂ ಗಾಯಗೊಂಡಿದ್ದು,ಪರಾರಿಯಾಗಿದ್ದಾರೆ. ನಾಪತ್ತೆಯಾಗಿರುವ ಉಗ್ರರಿಗೆ ಶೋಧ ಕಾರ್ಯ ನಡೆಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನೇಕಾರರಿಗೆ ನೇರ ನಗದು ವರ್ಗಾವಣೆ

Tue Jul 7 , 2020
ನೇಕಾರ್ ಸಮ್ಮಾನ್ ಯೋಜನೆ ಅಡಿ ರಾಜ್ಯದ ನೇಕಾರರಿಗೆ ನೇರ ಹಣ ವರ್ಗಾವಣೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ, ಮೊದಲ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ  ನೇರ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಮೂಲಕ ಪ್ರತಿ ನೇಕಾರರ ಖಾತೆಗೆ ಎರಡು ಸಾವಿರ ವರ್ಗಾವಣೆ ಆಗುವುದರಿಂದ ಆರ್ಥಿಕ ನರೆವು ದೊರೆಯುತ್ತದೆ. ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ 10.96 ಕೋಟಿ ವೆಚ್ಚವಾಗುತ್ತದೆ. ಕೈಮಗ್ಗ […]

Advertisement

Wordpress Social Share Plugin powered by Ultimatelysocial