ಎರಡು ತಿಂಗಳ ಹಿಂದೆ ಕಂಪನಿ ಕ್ಲೋಸ್​, ಈಗ ಬದುಕು ಕೂಡ ಅಂತ್ಯ: ಎಸ್ಟೀಮ್​ ಕಾರಿನಲ್ಲಿ ಅನಾಥವಾಗಿತ್ತು ಶವ

ಎರಡು ತಿಂಗಳ ಹಿಂದೆ ಕಂಪನಿ ಕ್ಲೋಸ್​, ಈಗ ಬದುಕು ಕೂಡ ಅಂತ್ಯ: ಎಸ್ಟೀಮ್​ ಕಾರಿನಲ್ಲಿ ಅನಾಥವಾಗಿತ್ತು ಶವ.

ಆನೇಕಲ್: ಎರಡು ತಿಂಗಳ ಹಿಂದೆ ಕಂಪನಿ ಕ್ಲೋಸ್ ಮಾಡಿದ್ದ ವ್ಯಕ್ತಿಯ ಬದುಕು ಕೂಡ ಇದೀಗ ಅಂತ್ಯವಾಗಿದ್ದು, ಎಸ್ಟೀಮ್​ ಕಾರಿನಲ್ಲಿ ಶವ ಅನಾಥವಾಗಿರುವುದು ಕಂಡುಬಂದಿದೆ. ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರ ರಸ್ತೆಯಲ್ಲಿ ಈ ಶವ ಪತ್ತೆಯಾಗಿದೆ.

ಶವ ಕಂಡುಬಂದಿರುವ ಮಾರುತಿ ಎಸ್ಟೀಮ್​ ಕಾರಿನ ಎಲ್ಲ ಗ್ಲಾಸ್​ ಕ್ಲೋಸ್ ಆಗಿದ್ದು, ಸಾವಿಗೀಡಾದ ವ್ಯಕ್ತಿ ಬೆಂಗಳೂರಿನ ಡೇರಿ ಸರ್ಕಲ್​ ನಿವಾಸಿ ಪಾರ್ಥಸಾರಥಿ ಎಂದು ಗುರುತಿಸಲಾಗಿದೆ. ಸಾವಿಗೂ ಮುನ್ನ ಈ ವ್ಯಕ್ತಿ ಬೇಸರದಲ್ಲಿ ಗದ್ಗದಿತರಾಗಿ ತಮಿಳಿನಲ್ಲಿ ಮಾತನಾಡುತ್ತ ನೋವು ತೋಡಿಕೊಂಡ ವಿಡಿಯೋ ತುಣುಕುಗಳು ಕೂಡ ಲಭಿಸಿವೆ.

ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಕಂಪನಿಯೊಂದನ್ನು ಹೊಂದಿದ್ದ ಇವರು ನಷ್ಟದಿಂದಾಗಿ ಎರಡು ತಿಂಗಳ ಹಿಂದೆ ಅದನ್ನು ಕ್ಲೋಸ್ ಮಾಡಿದ್ದರು. ಅವರ ಶವ ಕಾರಿನ ಡ್ರೈವರ್ ಸೀಟ್​ನಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮದ್ಯ ಹಾಗೂ ನೀರಿನ ಬಾಟಲಿ ಪತ್ತೆಯಾಗಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜುಲೈನಲ್ಲಿ ರಾಜ್ಯ ಸರಕಾರಿ ನೌಕರರಿಗೆ 7ನೆ ವೇತನ ಆಯೋಗ ಜಾರಿ: ಸುಬ್ರಹ್ಮಣ್ಯ ಶೇರಿಗಾರ್

Sun Dec 26 , 2021
ಉಡುಪಿ, ಡಿ.26: ಕೇಂದ್ರ ಮತ್ತು ರಾಜ್ಯ ಸರಕಾರಿ ವೇತನದಲ್ಲಿನ ವ್ಯತ್ಯಾಸ ಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಬಹು ಬೇಡಿಕೆಯ 7ನೆ ವೇತನ ಆಯೋಗವು 2022ರ ಜುಲೈ ತಿಂಗಳಲ್ಲಿ ಜಾರಿಯಾಗಲಿದ್ದು, ಈ ಬಗ್ಗೆ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ತಿಳಿಸಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ ಇನ್‌ನಲ್ಲಿ ರವಿವಾರ ನಡೆದ ಜಿಲ್ಲಾ […]

Advertisement

Wordpress Social Share Plugin powered by Ultimatelysocial