ಎರಡು ಹುಲಿ ಸೇರಿ ಎಂಟು ಪ್ರಾಣಿ ದತ್ತು

ತಾಲ್ಲೂಕಿನ ಬಿಳಿಕಲ್‌ ಸಂರಕ್ಷಿತ ಅರಣ್ಯದ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಎಂಟು ಪ್ರಾಣಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಉದ್ಯಾನದಲ್ಲಿ ನಡೆಯಿತು. ಸಂಡೂರಿನ ವೀರಭದ್ರಪ್ಪ ಸಂಗಪ್ಪ ಗಣಿ ಕಂಪನಿಯು ವಾಯುಪುತ್ರ ಹೆಸರಿನ ಹುಲಿ, ಕುಮಾರಸ್ವಾಮಿ ಮಿನರಲ್ಸ್‌ ಎಕ್ಸ್‌ಪೋರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ನಿಂದ ಕೆಸರಿ ಹೆಸರಿನ ಸಿಂಹ ಹಾಗೂ ಪಿ. ಬಾಲಸುಬ್ಬ ಶೆಟ್ಟಿ ಅಂಡ್‌ ಸನ್‌ ಕಂಪನಿಯು ಚಾಮುಂಡಿ ಹೆಸರಿನ ಹುಲಿಯನ್ನು ದತ್ತು ತೆಗೆದುಕೊಂಡಿದೆ. ಮೂರೂ ಕಂಪನಿಗಳು ತಲಾ ₹1 ಲಕ್ಷ ಪಾವತಿಸಿವೆ. ವಿಜಯಾ ಬ್ಯಾಂಕ್‌ ಶಾಖೆಯು ತಲಾ ಒಂದು ನರಿ ಹಾಗೂ ನೀಲಗಾಯ್‌, ದೇನಾ ಬ್ಯಾಂಕ್‌ ಶಾಖೆಯು ತಲಾ ಒಂದು ಗುಳ್ಳೇನರಿ, ನೀಲಗಾಯ್‌ ಅನ್ನು ತಲಾ ₹30,000 ಕೊಟ್ಟು ದತ್ತು ಸ್ವೀಕರಿಸಿವೆ. ಎಚ್‌ಡಿಎಫ್‌ಸಿ ಬ್ಯಾಂಕ್‌ ಹೊಸಪೇಟೆ ಶಾಖೆಯು ₹21,000ಕ್ಕೆ ಕತ್ತೆ ಕಿರುಬ ಪ್ರಾಣಿಯನ್ನು ದತ್ತು ತೆಗೆದುಕೊಂಡಿದೆ. ವೀರಭದ್ರಪ್ಪ ಮತ್ತು ಕುಮಾರಸ್ವಾಮಿ ಗಣಿ ಕಂಪನಿಗಳು 2024ರ ವರೆಗೆ ಪ್ರಾಣಿಗಳನ್ನು ದತ್ತು ತೆಗೆದುಕೊಂಡರೆ, ಬಾಲಸುಬ್ಬ ಶೆಟ್ಟಿ ಕಂಪನಿಯವರು 2022ರ ವರೆಗೆ ದತ್ತು ಸ್ವೀಕರಿಸಿದ್ದಾರೆ. ಎಚ್‌ಡಿಎಫ್‌ಸಿ ಬ್ಯಾಂಕ್‌, ವಿಜಯಾ ಬ್ಯಾಂಕ್‌ ಹಾಗೂ ದೇನಾ ಬ್ಯಾಂಕ್‌ ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಂಡಿವೆ.ದತ್ತು ಸ್ವೀಕರಿಸಿದವರಿಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್‌ ದವೆ ಅವರು ಪ್ರಮಾಣ ಪತ್ರ ವಿತರಿಸಿದರು. ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಎಸ್‌. ಲಿಂಗರಾಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ದರಾಮಪ್ಪ ಇದ್ದರು.

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ

Wed Jul 22 , 2020
ಕೊರೊನಾ ವೈರಸ್ ಪಾಸಿಟಿವ್ ವ್ಯಕ್ತಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸದೆ ಆರೋಗ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕೊರೊನಾ ಸೋಂಕು ದೃಢವಾದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ನರಳಾಟ ಅನುಭವಿಸಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 13 ರಂದು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದ 33 ವರ್ಷದ ವ್ಯಕ್ತಿಗೆ ನಿನ್ನೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಚಿತ್ರದುರ್ಗದ ನೆಹರೂ ನಗರದ ಮನೆಯಲ್ಲಿ ವಾಸವಿರುವ ಸೋಂಕಿತ ವ್ಯಕ್ತಿಯನ್ನು ಕೋವಿಡ್ […]

Advertisement

Wordpress Social Share Plugin powered by Ultimatelysocial