ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವವರಲ್ಲಿ ಯಾರಾದರೂ ಸತ್ಯ ಹರಿಶ್ಚಂದ್ರ ಇದ್ದಾರಾ? ಎಲ್ಲರ ಅವಧಿಯಲ್ಲೂ ಭ್ರಷ್ಟಾಚಾರ, ಹಗರಣಗಳು ಆಗಿವೆ. ನೂತನವಾಗಿ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿರುವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಸಂದರ್ಭದಲ್ಲಿ ಏನೇನು ಹಗರಣ ಆಗಿದೆ ಅಂತ ಜನರಿಗೆ ಗೊತ್ತಿದೆ. ಯಾರೂ ಸತ್ಯಹರಿಶ್ಚಂದ್ರರಿಲ್ಲ, ಯಾರೂ ಸತ್ಯವಂತ ಧರ್ಮರಾಯರು ಇಲ್ಲ. ನಳ ಮಹಾರಾಜನಂತಹ ಸತ್ಯವಂತರು ಯಾರೂ ಇಲ್ಲ. ಎಲ್ಲಾ ಮುಖ್ಯಮಂತ್ರಿಗಳ ಅವಧಿಯಲ್ಲೂ ಭ್ರಷ್ಟಾಚಾರ, ಹಗರಣಗಳು ಆಗಿವೆ. ಇದರ ಬಗ್ಗೆ ದಾಖಲೆಗಳು ಕೂಡ ಇವೆ. ಅದನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.
ಎಲ್ಲರ ಅವಧಿಯಲ್ಲೂ ಭ್ರಷ್ಟಾಚಾರ ನಡೆದಿದೆ
Please follow and like us: